9:39 PM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಅನಾವಶ್ಯಕ ಓಡಾಡಿದರೆ ಅರೆಸ್ಟ್ ಗ್ಯಾರಂಟಿ:ರಾಜ್ಯದಲ್ಲಿ ಒಂದೇ ದಿನ 2 ಸಾವಿರಕ್ಕೂ ಹೆಚ್ಚು ವಾಹನಗಳ ಸೀಜ್ 

23/05/2021, 15:16

ಬೆಂಗಳೂರು(reporterkarnataka news): ಕೊರೊನಾ ನಿಯಂತ್ರಣಕ್ಕೆ ಎರಡನೇ ಲಾಕ್ ಡೌನ್ ನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ರಾಜ್ಯ ಸರಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಅನಾವಶ್ಯಕ ಓಡಾಟ ನಡೆಸಿದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಇಷ್ಟೇ ಅಲ್ಲ ಕಾರು ಮಾಲೀಕರ ಬಂಧನ ಕೂಡ ನಡೆಸಲಾಗುತ್ತಿದೆ. ಇದೀಗ ಒಂದೇ ದಿನ ರಾಜ್ಯದಲ್ಲಿ 2000ಕ್ಕೂ ಹೆಚ್ಚು ವಾಹನ ಸೀಜ್ ಮಾಡಿ 100ಕ್ಕೂ ಹೆಚ್ಚು ಮಂದಿ ಬಂಧಿಸಲಾಗಿದೆ.

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಭಾನುವಾರ ಸಮಯ ಮೀರಿ ಬೆಂನ್ಜ್ ಕಾರಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ತಡೆದ ಪೊಲೀಸರು ಕಾರು ಸೀಜ್ ಮಾಡಿದ್ದಾರೆ. ಕಾರು ಚಲಾಯಿಸುತ್ತಿದ್ದ ವ್ಯಕ್ತಿ ತಾನು ಮಹಿಳಾ ಆಯೋಗದ ಅಧ್ಯಕ್ಷೆಗೆ ಕರೆ ಮಾಡುವುದಾಗಿ ಹೇಳಿ, ಕರೆಯನ್ನು ಪೊಲೀಸರಿಗೂ ನೀಡಿದರು. ಮಹಿಳಾ ಆಯೋಗದ ಅಧ್ಯಕ್ಷೆ ಎಂದು ಹೇಳಿಕೊಂಡು ಮಾತನಾಡಿದರು ಕಾರು ಬಿಡುವಂತೆ ಪೊಲೀಸರಿಗೆ ಸೂಚಿಸಿದರು. ಆದರೆ ಪೊಲೀಸರು ಇದಕ್ಕೆ ಕ್ಯಾರೇ ಮಾಡದೆ ಇದು ಸರಕಾರದ ನಿಯಮ ಎಂದು ಕಾರನ್ನು ಸೀಜ್ ಮಾಡಿಯೇ ಬಿಟ್ಟಿತು. ಇನ್ನೊಂದು ಪ್ರಕರಣದಲ್ಲಿ ತಿಥಿ ಪೂಜೆಗೆ ತೆರಳಿದ್ದ ಅರ್ಚಕರನ್ನು ಪೊಲೀಸರು ಲಾಕ್ ಮಾಡಿದ್ದಾರೆ. ಅರ್ಚಕರು ತಾವು ತಿಥಿ ಪೂಜೆ ಮುಗಿಸಿಕೊಂಡು ಬರುತ್ತಿರುವುದಾಗಿ ಹೇಳಿದರೆ,  ಕೊರೊನಾದಿಂದ ಜನರು ಸಾಯುತ್ತಿದ್ದಾರೆ. ನಿಮ್ಮದ್ದೇನು ತಿಥಿ ಪೂಜೆ ಎಂದು ಪ್ರಶ್ನಿಸಿ ಪೊಲೀಸರು ವಾಹನ ಸೀಜ್ ಮಾಡಿದ್ದಾರೆ. ಅಷ್ಟೇ ಅಲ್ಲದೆ

ಕೊರೊನಾ ಪಾಸಿಟಿವ್ ಬಂದವರು ಹೊರಗೆ ಓಡಾಡಿದರೆ ಪೊಲೀಸರು ಅವರ ಮೇಲೆ ಕೇಸು ಹಾಕುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೆಲ್ಲ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು