7:13 AM Wednesday5 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಅನಾವಶ್ಯಕ ಓಡಾಡಿದರೆ ಅರೆಸ್ಟ್ ಗ್ಯಾರಂಟಿ:ರಾಜ್ಯದಲ್ಲಿ ಒಂದೇ ದಿನ 2 ಸಾವಿರಕ್ಕೂ ಹೆಚ್ಚು ವಾಹನಗಳ ಸೀಜ್ 

23/05/2021, 15:16

ಬೆಂಗಳೂರು(reporterkarnataka news): ಕೊರೊನಾ ನಿಯಂತ್ರಣಕ್ಕೆ ಎರಡನೇ ಲಾಕ್ ಡೌನ್ ನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ರಾಜ್ಯ ಸರಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಅನಾವಶ್ಯಕ ಓಡಾಟ ನಡೆಸಿದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಇಷ್ಟೇ ಅಲ್ಲ ಕಾರು ಮಾಲೀಕರ ಬಂಧನ ಕೂಡ ನಡೆಸಲಾಗುತ್ತಿದೆ. ಇದೀಗ ಒಂದೇ ದಿನ ರಾಜ್ಯದಲ್ಲಿ 2000ಕ್ಕೂ ಹೆಚ್ಚು ವಾಹನ ಸೀಜ್ ಮಾಡಿ 100ಕ್ಕೂ ಹೆಚ್ಚು ಮಂದಿ ಬಂಧಿಸಲಾಗಿದೆ.

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಭಾನುವಾರ ಸಮಯ ಮೀರಿ ಬೆಂನ್ಜ್ ಕಾರಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ತಡೆದ ಪೊಲೀಸರು ಕಾರು ಸೀಜ್ ಮಾಡಿದ್ದಾರೆ. ಕಾರು ಚಲಾಯಿಸುತ್ತಿದ್ದ ವ್ಯಕ್ತಿ ತಾನು ಮಹಿಳಾ ಆಯೋಗದ ಅಧ್ಯಕ್ಷೆಗೆ ಕರೆ ಮಾಡುವುದಾಗಿ ಹೇಳಿ, ಕರೆಯನ್ನು ಪೊಲೀಸರಿಗೂ ನೀಡಿದರು. ಮಹಿಳಾ ಆಯೋಗದ ಅಧ್ಯಕ್ಷೆ ಎಂದು ಹೇಳಿಕೊಂಡು ಮಾತನಾಡಿದರು ಕಾರು ಬಿಡುವಂತೆ ಪೊಲೀಸರಿಗೆ ಸೂಚಿಸಿದರು. ಆದರೆ ಪೊಲೀಸರು ಇದಕ್ಕೆ ಕ್ಯಾರೇ ಮಾಡದೆ ಇದು ಸರಕಾರದ ನಿಯಮ ಎಂದು ಕಾರನ್ನು ಸೀಜ್ ಮಾಡಿಯೇ ಬಿಟ್ಟಿತು. ಇನ್ನೊಂದು ಪ್ರಕರಣದಲ್ಲಿ ತಿಥಿ ಪೂಜೆಗೆ ತೆರಳಿದ್ದ ಅರ್ಚಕರನ್ನು ಪೊಲೀಸರು ಲಾಕ್ ಮಾಡಿದ್ದಾರೆ. ಅರ್ಚಕರು ತಾವು ತಿಥಿ ಪೂಜೆ ಮುಗಿಸಿಕೊಂಡು ಬರುತ್ತಿರುವುದಾಗಿ ಹೇಳಿದರೆ,  ಕೊರೊನಾದಿಂದ ಜನರು ಸಾಯುತ್ತಿದ್ದಾರೆ. ನಿಮ್ಮದ್ದೇನು ತಿಥಿ ಪೂಜೆ ಎಂದು ಪ್ರಶ್ನಿಸಿ ಪೊಲೀಸರು ವಾಹನ ಸೀಜ್ ಮಾಡಿದ್ದಾರೆ. ಅಷ್ಟೇ ಅಲ್ಲದೆ

ಕೊರೊನಾ ಪಾಸಿಟಿವ್ ಬಂದವರು ಹೊರಗೆ ಓಡಾಡಿದರೆ ಪೊಲೀಸರು ಅವರ ಮೇಲೆ ಕೇಸು ಹಾಕುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೆಲ್ಲ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು