3:07 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅನಾವಶ್ಯಕ ಓಡಾಡಿದರೆ ಅರೆಸ್ಟ್ ಗ್ಯಾರಂಟಿ:ರಾಜ್ಯದಲ್ಲಿ ಒಂದೇ ದಿನ 2 ಸಾವಿರಕ್ಕೂ ಹೆಚ್ಚು ವಾಹನಗಳ ಸೀಜ್ 

23/05/2021, 15:16

ಬೆಂಗಳೂರು(reporterkarnataka news): ಕೊರೊನಾ ನಿಯಂತ್ರಣಕ್ಕೆ ಎರಡನೇ ಲಾಕ್ ಡೌನ್ ನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ರಾಜ್ಯ ಸರಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಅನಾವಶ್ಯಕ ಓಡಾಟ ನಡೆಸಿದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಇಷ್ಟೇ ಅಲ್ಲ ಕಾರು ಮಾಲೀಕರ ಬಂಧನ ಕೂಡ ನಡೆಸಲಾಗುತ್ತಿದೆ. ಇದೀಗ ಒಂದೇ ದಿನ ರಾಜ್ಯದಲ್ಲಿ 2000ಕ್ಕೂ ಹೆಚ್ಚು ವಾಹನ ಸೀಜ್ ಮಾಡಿ 100ಕ್ಕೂ ಹೆಚ್ಚು ಮಂದಿ ಬಂಧಿಸಲಾಗಿದೆ.

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ಭಾನುವಾರ ಸಮಯ ಮೀರಿ ಬೆಂನ್ಜ್ ಕಾರಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ತಡೆದ ಪೊಲೀಸರು ಕಾರು ಸೀಜ್ ಮಾಡಿದ್ದಾರೆ. ಕಾರು ಚಲಾಯಿಸುತ್ತಿದ್ದ ವ್ಯಕ್ತಿ ತಾನು ಮಹಿಳಾ ಆಯೋಗದ ಅಧ್ಯಕ್ಷೆಗೆ ಕರೆ ಮಾಡುವುದಾಗಿ ಹೇಳಿ, ಕರೆಯನ್ನು ಪೊಲೀಸರಿಗೂ ನೀಡಿದರು. ಮಹಿಳಾ ಆಯೋಗದ ಅಧ್ಯಕ್ಷೆ ಎಂದು ಹೇಳಿಕೊಂಡು ಮಾತನಾಡಿದರು ಕಾರು ಬಿಡುವಂತೆ ಪೊಲೀಸರಿಗೆ ಸೂಚಿಸಿದರು. ಆದರೆ ಪೊಲೀಸರು ಇದಕ್ಕೆ ಕ್ಯಾರೇ ಮಾಡದೆ ಇದು ಸರಕಾರದ ನಿಯಮ ಎಂದು ಕಾರನ್ನು ಸೀಜ್ ಮಾಡಿಯೇ ಬಿಟ್ಟಿತು. ಇನ್ನೊಂದು ಪ್ರಕರಣದಲ್ಲಿ ತಿಥಿ ಪೂಜೆಗೆ ತೆರಳಿದ್ದ ಅರ್ಚಕರನ್ನು ಪೊಲೀಸರು ಲಾಕ್ ಮಾಡಿದ್ದಾರೆ. ಅರ್ಚಕರು ತಾವು ತಿಥಿ ಪೂಜೆ ಮುಗಿಸಿಕೊಂಡು ಬರುತ್ತಿರುವುದಾಗಿ ಹೇಳಿದರೆ,  ಕೊರೊನಾದಿಂದ ಜನರು ಸಾಯುತ್ತಿದ್ದಾರೆ. ನಿಮ್ಮದ್ದೇನು ತಿಥಿ ಪೂಜೆ ಎಂದು ಪ್ರಶ್ನಿಸಿ ಪೊಲೀಸರು ವಾಹನ ಸೀಜ್ ಮಾಡಿದ್ದಾರೆ. ಅಷ್ಟೇ ಅಲ್ಲದೆ

ಕೊರೊನಾ ಪಾಸಿಟಿವ್ ಬಂದವರು ಹೊರಗೆ ಓಡಾಡಿದರೆ ಪೊಲೀಸರು ಅವರ ಮೇಲೆ ಕೇಸು ಹಾಕುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೆಲ್ಲ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು