4:33 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಬಾಳೇಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ನಾಳೆ ಅದ್ದೂರಿ ದೀಪೋತ್ಸವ

21/11/2025, 19:05

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಪ್ರಸಿದ್ಧ ಐತಿಹಾಸಿಕ ದೇಗುಲವಾಗಿರುವ ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ನಾಳೆ
ಕಾರ್ತಿಕ ದೀಪೋತ್ಸವದ ಪ್ರಯುಕ್ತ 33ನೇ ವರ್ಷದ
ದೀಪೋತ್ಸವ ಅತ್ಯಂತ ವೈಭವದಿಂದ ನಡೆಯಲಿದೆ.
ಸುಮಾರು 1000 ಅಡಿ ಬೆಟ್ಟದ ಮೇಲಿರುವ ದೇಗುಲಕ್ಕೆ
ಸಾವಿರಾರು ಭಕ್ತರು ಆಗಮಿಸಲಿದ್ದು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

*ಪೂಜೆ, ದೀಪೋತ್ಸವ, ಅನ್ನ ಸಂತರ್ಪಣೆ !:*
ನಾಳೆ ಸಂಜೆ ಸ್ವಾಮಿಗೆ ರುದ್ರಭಿಷೇಕ, ವಿಶೇಷ ಅಲಂಕಾರ
ನಂತರ ಸಿದ್ದೇಶ್ವರ ಸ್ವಾಮಿಗೆ ಪೂಜೆ, ದೀಪೋತ್ಸವ ನೆಡೆಯಲಿದೆ ಹಾಗೂ ಆರೂಢ ಪ್ರಶ್ನೆಯಲ್ಲಿ ಬಂದಂತೆ ಅಗಸ್ತ್ಯ ಮಹರ್ಷಿಗಳು ತಪಗೈದ ಸ್ಥಳವಾದ್ದರಿಂದ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ಅಗಸ್ತ್ಯ ಮಹರ್ಷಿಗಳ ಗುರುಪೀಠ ಪೂಜೆ ನಡೆಯಲಿದೆ. ನಂತರ ಬಂದಿರುವ ಎಲ್ಲಾ ಭಕ್ತಾದಿಗಳಿಗೂ ಅನ್ನ ಸಂತರ್ಪಣೆ ನೆಡೆಯಲಿದೆ. ಆ ನಂತರ ವಿದ್ವಾನ್ ರಾಘವೇಂದ್ರ ಹೆಗ್ಗೋಡು ಮತ್ತು ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ನ. 23ರ ಸಂಜೆ 6:30ಕ್ಕೆ ಡ್ಯಾನ್ಸ್ ಪ್ಯಾಲೇಸ್ ತೀರ್ಥಹಳ್ಳಿ ಇವರ ಸಹಯೋಗದಲ್ಲಿ ಸಿದ್ದೇಶ್ವರ ಬೆಟ್ಟದ ತೆಪ್ಪಲಿನಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ನಡೆಯಲಿದೆ.
ನಿಸರ್ಗ ಮಾತೆಯ ಮುಡಿಯಲ್ಲಿರುವ ಸಿದ್ದೇಶ್ವರ ಬೆಟ್ಟದ
ತುದಿಯವರೆಗೆ ಜಗಮಗಿಸುವ ವಿದ್ಯುತ್ ದೀಪಾಲಂಕಾರ, ಸಿಡಿ ಮದ್ದಿನ ಜೇಂಕಾರದೊಂದಿಗೆ ಸ್ವಾಮಿಯ ದೀಪೋತ್ಸವ ವೀಕ್ಷಿಸಿ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಲು ಸಮಿತಿಯವರು ಈ ಮೂಲಕ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು