7:22 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಬಾಳೇಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ನಾಳೆ ಅದ್ದೂರಿ ದೀಪೋತ್ಸವ

21/11/2025, 19:05

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಪ್ರಸಿದ್ಧ ಐತಿಹಾಸಿಕ ದೇಗುಲವಾಗಿರುವ ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ನಾಳೆ
ಕಾರ್ತಿಕ ದೀಪೋತ್ಸವದ ಪ್ರಯುಕ್ತ 33ನೇ ವರ್ಷದ
ದೀಪೋತ್ಸವ ಅತ್ಯಂತ ವೈಭವದಿಂದ ನಡೆಯಲಿದೆ.
ಸುಮಾರು 1000 ಅಡಿ ಬೆಟ್ಟದ ಮೇಲಿರುವ ದೇಗುಲಕ್ಕೆ
ಸಾವಿರಾರು ಭಕ್ತರು ಆಗಮಿಸಲಿದ್ದು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

*ಪೂಜೆ, ದೀಪೋತ್ಸವ, ಅನ್ನ ಸಂತರ್ಪಣೆ !:*
ನಾಳೆ ಸಂಜೆ ಸ್ವಾಮಿಗೆ ರುದ್ರಭಿಷೇಕ, ವಿಶೇಷ ಅಲಂಕಾರ
ನಂತರ ಸಿದ್ದೇಶ್ವರ ಸ್ವಾಮಿಗೆ ಪೂಜೆ, ದೀಪೋತ್ಸವ ನೆಡೆಯಲಿದೆ ಹಾಗೂ ಆರೂಢ ಪ್ರಶ್ನೆಯಲ್ಲಿ ಬಂದಂತೆ ಅಗಸ್ತ್ಯ ಮಹರ್ಷಿಗಳು ತಪಗೈದ ಸ್ಥಳವಾದ್ದರಿಂದ ಶ್ರೀ ಸ್ವಾಮಿಯ ಸನ್ನಿಧಿಯಲ್ಲಿ ಅಗಸ್ತ್ಯ ಮಹರ್ಷಿಗಳ ಗುರುಪೀಠ ಪೂಜೆ ನಡೆಯಲಿದೆ. ನಂತರ ಬಂದಿರುವ ಎಲ್ಲಾ ಭಕ್ತಾದಿಗಳಿಗೂ ಅನ್ನ ಸಂತರ್ಪಣೆ ನೆಡೆಯಲಿದೆ. ಆ ನಂತರ ವಿದ್ವಾನ್ ರಾಘವೇಂದ್ರ ಹೆಗ್ಗೋಡು ಮತ್ತು ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ನ. 23ರ ಸಂಜೆ 6:30ಕ್ಕೆ ಡ್ಯಾನ್ಸ್ ಪ್ಯಾಲೇಸ್ ತೀರ್ಥಹಳ್ಳಿ ಇವರ ಸಹಯೋಗದಲ್ಲಿ ಸಿದ್ದೇಶ್ವರ ಬೆಟ್ಟದ ತೆಪ್ಪಲಿನಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ನಡೆಯಲಿದೆ.
ನಿಸರ್ಗ ಮಾತೆಯ ಮುಡಿಯಲ್ಲಿರುವ ಸಿದ್ದೇಶ್ವರ ಬೆಟ್ಟದ
ತುದಿಯವರೆಗೆ ಜಗಮಗಿಸುವ ವಿದ್ಯುತ್ ದೀಪಾಲಂಕಾರ, ಸಿಡಿ ಮದ್ದಿನ ಜೇಂಕಾರದೊಂದಿಗೆ ಸ್ವಾಮಿಯ ದೀಪೋತ್ಸವ ವೀಕ್ಷಿಸಿ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಲು ಸಮಿತಿಯವರು ಈ ಮೂಲಕ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು