8:41 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.…

ಇತ್ತೀಚಿನ ಸುದ್ದಿ

ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

22/11/2025, 19:36

ಹುಬ್ಬಳ್ಳಿ(reporterkarnataka.com): ರಾಜ್ಯದಲ್ಲಿ ಮೆಕ್ಕೆಜೋಳ ಖರೀದಿ ಮತ್ತು ಆಮದು ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಹಸಿ ಸುಳ್ಳುಗಳನ್ನೇ ಬಿತ್ತರಿಸುತ್ತ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದರು.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ರಾಜ್ಯದ ರೈತರ ಹಿತರಕ್ಷಣೆ ಕಡೆಗಣಿಸಿದೆ. ಕೈಲಾಗದವರು ಮೈ ಪರಚಿಕೊಂಡರು ಎಂಬಂತೆ ತನ್ನ ಆಡಳಿತ ವೈಫಲ್ಯದಿಂದ ಕಂಗೆಟ್ಟು ಈಗ ಕೇಂದ್ರದ ಮೇಲೆ ಗೂಬೆ ಕೂರಿಸಲು ನೋಡುತ್ತಿದೆ ಎಂದು ನೇರ ವಾಗ್ದಾಳಿ ನಡೆಸಿದರು.
ಮೆಕ್ಕೆಜೋಳ ಖರೀದಿ, ಎಥೆನಾಲ್ ಉತ್ಪಾದನೆ ಮತ್ತು ಬೆಂಬಲ ಬೆಲೆ ನೀಡುವಲ್ಲಿ ರಾಜ್ಯ ಸರ್ಕಾರ ತಾನು ತತ್ ಕ್ಷಣ ಕೈಗೊಳ್ಳಬೇಕಾದ ಕಾರ್ಯ ಮರೆತು ಕೇಂದ್ರದತ್ತ ಬೊಟ್ಟು ತೋರುತ್ತಿದೆ. ಅಲ್ಲದೇ, ‘ಸಿಎಂ ಮೆಕ್ಕೆಜೋಳ ಆಮದು ಬಗ್ಗೆ ಹಸಿ ಹಸಿ ಸುಳ್ಳುಗಳ ರೈಲು ಬಿಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ ಸಚಿವ ಜೋಶಿ, ಈ ಸಂಬಂಧ ಸಿಎಂಗೆ ನೇರಾ ನೇರಾ ಪ್ರಶ್ನೆಗಳನ್ನೂ ಮುಂದಿಟ್ಟಿದ್ದಾರೆ.

*ಡಿಸ್ಟಿಲರಿಗಳಿಗೇಕೆ ಸೂಚನೆ ನೀಡಿಲ್ಲ?:* ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳದ ಖಾತರಿ ಖರೀದಿಗೆ NCCF ಅಥವಾ NAFED ಜತೆ ಒಪ್ಪಂದ ಮಾಡಿಕೊಳ್ಳಲು ರಾಜ್ಯದ ಡಿಸ್ಟಿಲರಿಗಳಿಗೆ ನೀವೇಕೆ ಸೂಚನೆ ನೀಡಿಲ್ಲ? ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದಿಂದಲೇ ಪರವಾನಗಿ ಪಡೆದ ಈ ಡಿಸ್ಟಿಲರಿಗಳಿಗೆ ಮೆಕ್ಕೆಜೋಳ ಖರೀದಿಗಾಗಿ ಅಧಿಕೃತ ಒಪ್ಪಂದ ಮಾಡಿಕೊಳ್ಳಲು ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕಿತ್ತು ಎಂದು ಜೋಶಿ ತಿರುಗೇಟು ನೀಡಿದ್ದಾರೆ.

*ಡಿಸ್ಟಿಲರಿಗಳಿಗೆ ಬೆಂಬಲ ಬೆಲೆ ಏಕೆ ಕಡ್ಡಾಯಗೊಳಿಸಿಲ್ಲ?;* ಡಿಸ್ಟಿಲರಿಗಳು ಕನಿಷ್ಠ ಬೆಂಬಲ ಬೆಲೆ(MSP)ಯಲ್ಲೇ ಮೆಕ್ಕೆಜೋಳ ಖರೀದಿಸಬೇಕೆಂದು ಕಡ್ಡಾಯಗೊಳಿಸಿಲ್ಲವೇಕೆ ಸ್ಥಳೀಯ ಖರೀದಿ ನಿಯಮಗಳನ್ನು ಜಾರಿಗೊಳಿಸುವ ಸಂಪೂರ್ಣ ಅಧಿಕಾರ ರಾಜ್ಯ ಸರ್ಕಾರದ ಬಳಿ ಇದೆಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

‘ಒಂದು ವೇಳೆ ಡಿಸ್ಟಿಲರಿಗಳು mspಗಿಂತ ಕಡಿಮೆ ದರದಲ್ಲಿ ಮೆಕ್ಕೆಜೋಳ ಖರೀದಿಸುತ್ತಿದ್ದರೆ ಅದಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಸೂಕ್ತ ಆದೇಶ ನೀಡದಿರುವುದೇ ಪ್ರಮುಖ ಕಾರಣ’ ಎಂದು ಚಾಟಿ ಬೀಸಿದ ಸಚಿವರು, ಡಿಸ್ಟಿಲರಿಗಳು ಬೇಡಿಕೆ ನೀಡಬೇಕೆಂದು SOP ಯಲ್ಲಿ ಸ್ಪಷ್ಟವಾಗಿ ಹೇಳಿದೆ. ಅಲ್ಲದೇ, ಈ ಎಲ್ಲಾ ಡಿಸ್ಟಿಲರಿಗಳು ರಾಜ್ಯ ಸರ್ಕಾರದ ಅಬಕಾರಿ ಇಲಾಖೆ ಅಡಿ ಬರುತ್ತವೆ. ಇದೆಲ್ಲಾ ಗೊತ್ತಿದ್ದರೂ ನಿಮ್ಮ ವೈಫಲ್ಯ, ಆಡಳಿತ ನಿಷ್ಕ್ರಿಯತೆ ಮರೆಮಾಚಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತ ರೈತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದೀರಿ ಎಂದು ಸಿಎಂ ವಿರುದ್ಧ ಕಿಡಿ ಕಾರಿದರು.

*70 ಲಕ್ಷ ಮೆಟ್ರಿಕ್ ಟನ್ ಆಮದು ಹಸಿ ಸುಳ್ಳು:* ಇನ್ನು ಕೇಂದ್ರ ಸರ್ಕಾರ ಈ ವರ್ಷ 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಆಮದು ಮಾಡಿಕೊಂಡಿದೆ ಎಂಬುದೇ ಹಸಿ ಸುಳ್ಳು. ಇದು ಸತ್ಯಕ್ಕೆ ದೂರವಾದ ಮಾತು ಎಂದ ಸಚಿವರೂ, 2025-26ರಲ್ಲಿ ಕೇವಲ 0.5 LMT ಮಾತ್ರ ಆಮದಾಗಿದೆ. ಇದಕ್ಕಿಂತ ರಫ್ತು ಹೆಚ್ಚಿದೆ. ಬರೋಬ್ಬರಿ 2.52 LMT ರಫ್ತು ಮಾಡಿದೆ ಎಂದು ಅಂಕಿ ಅಂಶ ಸಹಿತ ವಿವರಿಸಿದರು ಸಚಿವರು.
ಮೆಕ್ಕೆಜೋಳದ ಆಮದು ಸುಂಕ ಶೇ.50ರಷ್ಟಿದ್ದು, ಇದು ಆಮದನ್ನು ಪರಿಣಾಮಕಾರಿಯಾಗಿ ತಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ವಾಸ್ತವ ಬಿಟ್ಟು ಸುಳ್ಳು ಅಂಕಿಅಂಶಗಳನ್ನು ನೀಡುತ್ತಿದ್ದಾರೆ. ಬ್ಲೇಮ್ ಗೇಮನ್ನೇ ತಮ್ಮ ಆಡಳಿತದ ಮೂಲ ಮಂತ್ರವನ್ನಾಗಿಸಿಕೊಂಡಿದ್ದಾರೆ. ಇದರಿಂದ ಏನೂ ಪ್ರಯೋಜನವಾಗದು ಎಂದು ಜೋಶಿ ತಿರುಗೇಟು ನೀಡಿದರು.
ಎಥೆನಾಲ್ ಮತ್ತು ಕೈಗಾರಿಕಾ ಬಳಕೆಗೆ ಮೆಕ್ಕೆಜೋಳ ಹಂಚಿಕೆ ಪ್ರಮಾಣದಲ್ಲಿ ಅಧಿಕ ಏರಿಕೆಯಾಗಿದೆ. 2022-23ರಲ್ಲಿ 8.29 LMT, 2023-24ರಲ್ಲಿ 75.38 LMT, 2024-25ರಲ್ಲಿ ಬರೋಬ್ಬರಿ 125.75 LMT ಆಗಿದೆ. 2022-23 ಕ್ಕೆ ಹೋಲಿಸಿದರೆ ಶೇ.1,417 ರಷ್ಟು ಹೆಚ್ಚಳವಾಗಿದೆ ಮತ್ತು ಕಳೆದ ವರ್ಷಕ್ಕಿಂತ ಶೇ.66ರಷ್ಟು ಏರಿಕೆಯಾಗಿದೆ. ಕೇಂದ್ರ ಸರ್ಕಾರ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿಸಿದೆ. ಆದರೆ ರಾಜ್ಯ ಸರ್ಕಾರ ರೈತರಿಗೆ ಇದರ ಲಾಭ ಲಭಿಸುವಂತೆ ನೋಡಿಕೊಳ್ಳುವಲ್ಲಿ ಸೋತಿದೆ ಎಂದು ಪ್ರಲ್ಹಾದ ಜೋಶಿ ಆರೋಪಿಸಿದರು.

*ರೈತರ ಕಲ್ಯಾಣಕ್ಕೆ ಕೇಂದ್ರ ಸದಾ ಬದ್ಧ:* ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕೆ ಸದಾ ಬದ್ಧವಾಗಿದೆ. ಇದನ್ನರಿಯದೆ ರಾಜ್ಯ ಸರ್ಕಾರ ಪ್ರತಿ ಬಾರಿಯೂ ಕೇಂದ್ರದತ್ತ ಬೆರಳು ತೋರಿ ದೂಷಿಸುವುದು ಸರಿಯಲ್ಲ. ಇದರ ಬದಲು ರಾಜ್ಯದ ರೈತರ ಸಂಕಷ್ಟ ಪರಿಹರಿಸುವಲ್ಲಿ ಕೂಡಲೇ ಕಾರ್ಯತತ್ಪರ ವಗಳು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು