5:39 PM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ ಸಂಚಾರಕ್ಕೆ ಅಡಚಣೆ

23/11/2025, 17:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕರ್ನಾಟಕ ಕೇರಳ ರಾಜ್ಯ ಹೆದ್ದಾರಿ, ವಿರಾಜಪೇಟೆ ತಾಲ್ಲೂಕಿನ ಪೆರುಂಬಾಡಿ ಗೇಟಿನಿಂದ 15 ಕಿಲೋಮೀಟರ್ ದೂರದ ರಕ್ಷಿತಾ ಅರಣ್ಯದ ನಡುವೆ ಹಾದು ಹೋಗುವ ಮುಖ್ಯರಸ್ತೆಯಲ್ಲಿ ನಿನ್ನೆ ರಾತ್ರಿ ಸರಕು ತುಂಬಿದ ಲಾರಿ ಒಂದು ರಸ್ತೆಗೆ ಮಗುಚಿ ಇರುವ ಘಟನೆ ನಡೆದಿದೆ.
ಘಟನೆಯಿಂದ ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ. ಮಾಕುಟ್ಟ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ಒಂದುವರೆ ತಿಂಗಳ ಹಿಂದೆ ಲೋಕೋಪಯೋಗಿ ಸಚಿವರು ಈ ರಸ್ತೆಯ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಆದರೆ ಈ ರಸ್ತೆಯಲ್ಲಿ ಈ ಹಿಂದೆ ಶೇಖರಿಸಿ ಇಡಲಾದ ಜಲ್ಲಿಕಲ್ಲುಗಳು ಮಾತ್ರ ಕಾಣುತ್ತಿದ್ದು ರಸ್ತೆ ಕಾಮಗಾರಿ ಆರಂಭಗೊಂಡಿಲ್ಲ. ಇಲ್ಲಿ ಸಂಚರಿಸುವ ಭಾರಿ ವಾಹನಗಳು ಸಂಕಟ ಎದುರಿಸುತ್ತಿವೆ.ಪೆರುoಬಾಡಿಯಿಂದ 22 km ದೂರದ ಮಾಕುಟ್ಟ ಗೇಟ್ ತಲುಪಲು ಇದೀಗ ಎರಡು ತಾಸು ಸಮಯ ಬೇಕಾಗಿದೆ. ಒಂದೆಡೆ ಸರ್ಕಾರ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದರು ಕಾಮಗಾರಿ ಮಾತ್ರ ಆರಂಭಗೊಂಡಿಲ್ಲ. ಸದ್ಯಕ್ಕೆ ಗುಳಿ ಮುಚ್ಚುವ ಕಾರ್ಯವಾದರೂ ನಡೆಸಬಹುದಿತ್ತಲ್ಲ ಎಂಬುದು ಇಲ್ಲಿ ಸಂಚರಿಸುವವರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು