8:18 PM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಚಿತ್ರದುರ್ಗ: 3 ದಿನಗಳ ಯುವ ರೆಡ್ ಕ್ರಾಸ್ ಬೆಂಗಳೂರು ವಿಭಾಗೀಯ ಮಟ್ಟದ ಶಿಬಿರ

23/11/2025, 20:17

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಚಿತ್ರದುರ್ಗದಲ್ಲಿ ಮೂರು ದಿನಗಳ ಯುವ ರೆಡ್ ಕ್ರಾಸ್ ಬೆಂಗಳೂರು ವಿಭಾಗೀಯ ಮಟ್ಟದ ಶಿಬಿರ ಉದ್ಘಾಟನೆಗೊಂಡಿತು.
ಈ ಶಿಬಿರದಲ್ಲಿ ಬೆಂಗಳೂರು ವಿಭಾಗದ 150 ವಿದ್ಯಾರ್ಥಿಗಳು/ ವಿವಿಧ ಕಾಲೇಜುಗಳ ಯುವ ರೆಡ್ ಕ್ರಾಸ್ ಸ್ವಯಂಸೇವಕರು ಭಾಗವಹಿಸುತ್ತಿದ್ದಾರೆ.

ಶಿಬಿರದ ಉದ್ಘಾಟನೆಯನ್ನು ಪ್ರೊ. ವೆಂಕಟೇಶ್ ಕೆ , ಮುಖ್ಯ ಅತಿಥಿಯಾಗಿ ಮೀರಾ ಶಿವಲಿಂಗಯ್ಯ, ಡಾ. ಪ್ರಿಯಾ ಪುರಾಣಿಕ, ಎಂ.ಕೆ. ಅನಂತ ರೆಡ್ಡಿ, ಆಗಮಿಸಿ ನೆರವೇರಿಸಿದರು. ಅವರು ಯುವ ರೆಡ್ ಕ್ರಾಸ್ ಸ್ವಯಂಸೇವಕರಿಗೆ ಸಮಾಜಸೇವೆ, ಮಾನವೀಯತೆ ಮತ್ತು ಜವಾಬ್ದಾರಿಯುತ ನಾಗರಿಕತೆಯನ್ನು ಬೆಳೆಸಿಕೊಳ್ಳುವ ಬಗ್ಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಬಸ್ರೂರು ರಾಜೀವ್ ಶೆಟ್ಟಿ (ಸಭಾಪತಿಗಳು ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ) ಅಧ್ಯಕ್ಷತೆ ವಹಿಸಿದ್ದರು. ಇತರೆ ರೆಡ್ ಕ್ರಾಸ್‌ನ ಗಣ್ಯರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಪ್ರಥಮ ಚಿಕಿತ್ಸೆ, ದಾನಧರ್ಮ, ವಿಪತ್ತು ನಿರ್ವಹಣೆ, ಆರೋಗ್ಯ ಜಾಗೃತಿ, ರಸ್ತೆ ಸುರಕ್ಷತೆ, ರಕ್ತದಾನದ ಮಹತ್ವ, artificial intelligence and advance technology, career guidance ನಾಯಕತ್ವಾಭಿವೃದ್ಧಿ ಹಾಗೂ ಮಾನವೀಯ ಮೌಲ್ಯಗಳ ಕುರಿತು ವಿವಿಧ ತರಗತಿಗಳು, practically ಯೋಗಾಭ್ಯಾಸ ಮತ್ತು ಸಂವಹನಾತ್ಮಕ ಅಧಿವೇಶನಗಳು ನಡೆಯಲಿವೆ.
ಡಾ. ಗಣನಾಥ ಶೆಟ್ಟಿ ಎಕ್ಕಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆಯ ರೆಡ್ ಕ್ರಾಸ್ ತಂಡ, ಅಧಿಕಾರಿಗಳು, ಹಾಗೂ ಯುವ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲು ತಮ್ಮ ಸಂಪೂರ್ಣ ಸಹಕಾರವನ್ನು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು