1:42 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ತಾಳ್ಮೆ, ಸಹನೆ, ಪರೋಪಕಾರಿತನ ಕನ್ನಡಿಗರ ಮೂಲ ಗುಣ: ಇತಿಹಾಸಕಾರ ಧರ್ಮೇಂದ್ರ ಕುಮಾರ್‌

24/11/2025, 19:01

•ಕನ್ನಡೇತರ ನಿವಾಸಿಗಳಿಂದ ಕನ್ನಡ ರಾಜ್ಯೋತ್ಸವದ ಆಚರಣೆ

ಬೆಂಗಳೂರು(reporterkarnataka.com): ತಾಳ್ಮೆ,ಸಹನೆ, ದೇಶಸೇವೆ, ಪರೋಪಕಾರಿ ನಡತೆ ಕನ್ನಡಿಗರ ಮೂಲ ಗುಣ, ಸದಾ ಮತ್ತೊಬ್ಬರ ಭಾವನೆಗೆ ಸ್ಪಂದಿಸುವುದು ನಮ್ಮ ನೆಲದ ಸಂಸ್ಕೃತಿ ಎಂದು ಕನ್ನಡ ಇತಿಹಾಸಕಾರ ಧರ್ಮೇಂದ್ರ ಕುಮಾರ್‌ ಅಭಿಪ್ರಾಯಪಟ್ಟರು.

ಪೂರ್ವ ಹೈಲ್ಯಾಂಡ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ನಿವಾಸಿಗಳೇ ಸೇರಿ “ಮಾತೃ ಭಾಷೆ ಯಾವುದೇ ಇರಲಿ, ಸ್ನೇಹಮಯ ಭಾಷೆ ಕನ್ನಡವಾಗಲಿ” ಶೀರ್ಷಿಕೆಯಡಿ “ಕನ್ನಡ ರಾಜ್ಯೋತ್ಸವ”ದ ವನ್ನು ಅದ್ಧೂರಿಯಾಗಿ ಆಚರಿಸಿದರು. ಈ ವೇಳೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಕೇವಲ ಭಾಷೆಯಲ್ಲ, ಅದೊಂದು ಭಾವನೆ, ನಮ್ಮ ಭಾಷೆ ನಮ್ಮವರ ನಡೆ, ನುಡಿಯನ್ನೂ ಪ್ರತಿಬಿಂಬಿಸುತ್ತದೆ. ಕನ್ನಡಿಗರೆಂದರೇ ನೆನಪಾಗುವುದೇ ತಾಳ್ಮೆ, ಸಹನೆ, ಪರೋಪಕಾರಿ ಗುಣ ಹೊಂದಿರುವ ಮನಸ್ಸುಗಳು ಎಂದು. ಎಲ್ಲರೂ ನಮ್ಮವರೇ ಎಂದು ಅಪ್ಪಿಕೊಂಡು ನಮ್ಮ ನಾಡಿನಲ್ಲಿ ಅವರಿಗೂ ಸ್ಥಳ ಹಾಗೂ ಅವಕಾಶಗಳನ್ನು ನೀಡುತ್ತಾ, ಅವರನ್ನೂ ನಮ್ಮವನ್ನಾಗಿಸಿಕೊಳ್ಳುವ ಗುಣವಿರುವವರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿರ್ದೇಶಕ ಎಸ್‌.ಎನ್‌. ಸೀತಾರಾಮ್‌, ಗಾಯಕ ಶಶಿಧರ್‌ ಕೋಟೆ ಮತ್ತಿತರರು ಉಪಸ್ಥಿತರಿದ್ದರು.

*ಕನ್ನಡೇತರ ನಿವಾಸಿಗಳಿಂದ ಕನ್ನಡ ರಾಜ್ಯೋತ್ಸವ*:
ಈ ಕನ್ನಡ ರಾಜ್ಯೋತ್ಸವದ ವಿಶೇಷವೆಂದರೆ, ಕನ್ನಡೇತರರು ಸೇರಿ ಆಚರಣೆ ಮಾಡಲಾಗಿದೆ. ೩ ಸಾವಿರಕ್ಕೂ ಹೆಚ್ಚು ನಿವಾಸಿಗಳಿರುವ ಪೂರ್ವ ಹೈಲ್ಯಾಂಡ್‌ ಅಪಾರ್ಟ್‌ಮೆಂಟ್‌ನಲ್ಲಿ ೧ ಸಾವಿರಕ್ಕೂ ಹೆಚ್ಚು ಕನ್ನಡೇತರ ನಿವಾಸಿಗಳು ಒಟ್ಟುಗೂಡಿ ರಾಜ್ಯೋತ್ಸವವನ್ನು ಪ್ರತಿ ವರ್ಷ ತುಂಬೂ ಪ್ರೀತಿಯಿಂದ ಆಚರಿಸುತ್ತಾ ಬಂದಿದ್ದಾರೆ. ಅಷ್ಟೆ ಅಲ್ಲದೆ, ಇಲ್ಲಿರುವ ಕನ್ನಡೇತರರು ಕನ್ನಡ ಭಾಷೆ ಕಲಿಯುವ ಮೂಲಕ ಕನ್ನಡಕ್ಕೆ ಗೌರವ ಸಮರ್ಪಣೆ ಮಾಡುತ್ತಾ ಬಂದಿದ್ದಾರೆ. ಮಕರಂದ ಸಂಸ್ಥೆ ಸಹಯೋಗದಲ್ಲಿ ಇಲ್ಲಿ, ಪ್ರತಿನಿತ್ಯ ಕನ್ನಡ ಕಲಿಕೆ ನಡೆಯುತ್ತಿದೆ.
ಇನ್ನು, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅಪಾರ್ಟ್‌ಮೆಂಟ್‌ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮ ಜರುಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು