ಇತ್ತೀಚಿನ ಸುದ್ದಿ
ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿ ಅಪಹರಣ, ವಂಚನೆ, ಸುಲಿಗೆಯಲ್ಲಿ ಭಾಗಿಯಾದ ಆರೋಪಿಯ ಬಂಧನ
25/11/2025, 19:47
ಮಂಗಳೂರು(reporterkarnataka.com): ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿ ಬಿಡುಗಡೆಗೊಂಡ ಬಳಿಕ ಅಪಹರಣ, ವಂಚನೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಸಮೀಪದ ನಿವಾಸಿ ಟಿ.ದಿನೇಶ್ ಶೆಟ್ಟಿ ಅಲಿಯಾಸ್ ದಿನ್ನು ಬಂಧಿತ ಆರೋಪಿ.
ಈತ ಮಂಗಳೂರು ದಕ್ಷಿಣ ಠಾಣಾ ಅಕ್ರ ಸಂಖ್ಯೆ 144/2009 ರ ಕೊಲೆ ಪ್ರಕರಣದಲ್ಲಿ ರವಿ ಪೂಜಾರಿ ಮತ್ತು ಕಲಿ ಯೊಗೀಶ್ ರವರಿಂದ ಸುಪಾರಿ ಪಡೆದು ನ್ಯಾಯವಾದಿ ಖಾಸೀಂ ನೌಷಾದ್ ನನ್ನು ಕೊಲೆ ಮಾಡಿದ ಆರೋಪದ ಮೇರೆಗೆ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದರಲ್ಲಿ 11 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿ ನಂತರ ಹೈಕೋರ್ಟ್ ಗೆ ಅಫೀಲು ಸಲ್ಲಿಸಿ ಡಿಸೆಂಬರ್ 2019 ರಲ್ಲಿ ಬಿಡುಗಡೆಗೊಂಡಿರುತ್ತಾನೆ. ನಂತರದ ದಿನಗಳಲ್ಲಿ ಕಾವೂರು ಠಾಣೆಯ ಅಕ್ರ ಸಂಖ್ಯೆ 01/2019 ರ ಅಪಹರಣ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆ ಅಕ್ರ ಸಂಖ್ಯೆ 88/2022 ರ ವಂಚನೆ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆ ಅಕ್ರ ಸಂಖ್ಯೆ 06/2023ರ ಸುಲಿಗೆ ಪ್ರಕರಣಗಳಲ್ಲಿಯೂ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂದೂವರೆ ವರ್ಷದಿಂದ ತಲೆ ಮೆರೆಸಿಕೊಂಡಿದ್ದ. ಇದೀಗ ಆರೋಪಿಯನ್ನು ಇಂದು ಎಸಿಪಿ ಉತ್ತರ ಉಪವಿಭಾಗ ಹಾಗೂ ಅವರ ತಂಡ ದಸ್ತಗಿರಿ ಮಾಡಿದ್ದಾರೆ.












