12:33 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ವ್ಯಾಸಂಗ ವಿಷಯದಲ್ಲಿ ಮನೆಯವರೊಂದಿಗೆ ಜಗಳ: ಮನ ನೊಂದ ವಿದ್ಯಾರ್ಥಿನಿ ನೇಣಿಗೆ ಶರಣು

01/09/2021, 21:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ವಾಸಿ ವಿದ್ಯಾರ್ಥಿನಿಯೋರ್ವಳು, ವ್ಯಾಸಂಗದ ವಿಚಾರವಾಗಿ ಪೋಷಕರೊಡನೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಉಜ್ಜಿನಿ ಗ್ರಾಮದ ನಿವಾಸಿಯಾದ ಪೂಜಾ ಯು.ಎನ್. (24) ವಿದ್ಯಾರ್ಥಿನಿ ದಾವಣಗೆರೆ ಜಿಲ್ಲೆಯ ಜಗಳೂರಿನ ಸಿದ್ದಾರ್ಥ್ ಬಿಇಡಿ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದು ಓದುತ್ತಿದ್ದಳು. ಈ ನಡುವೆ ಪೂಜಾ ಬಿಇಡಿ ವ್ಯಾಸಂಗ ಬಿಟ್ಟು ಪಿಎಚ್ಡಿ ಮಾಡುತ್ತೇನೆ ಎಂದು ಪೋಷಕರಲ್ಲಿ ಹೇಳಿಕೊಂಡಿದ್ದಾಳೆ. ಪೋಷಕರು ಮೊದಲು ಈ ವ್ಯಾಸಂಗ ಮುಗಿಸಿದ ನಂತರ ಮುಂದಿನ ವ್ಯಾಸಂಗ ಮಾಡು ಎಂದು ತಿಳಿ ಹೇಳಿದ್ದರಿಂದ ಬೇಸರಗೊಂಡ ಯುವತಿ ಪೂಜಾ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಈ ಘಟನೆ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು