7:32 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ವ್ಯಾಸಂಗ ವಿಷಯದಲ್ಲಿ ಮನೆಯವರೊಂದಿಗೆ ಜಗಳ: ಮನ ನೊಂದ ವಿದ್ಯಾರ್ಥಿನಿ ನೇಣಿಗೆ ಶರಣು

01/09/2021, 21:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ವಾಸಿ ವಿದ್ಯಾರ್ಥಿನಿಯೋರ್ವಳು, ವ್ಯಾಸಂಗದ ವಿಚಾರವಾಗಿ ಪೋಷಕರೊಡನೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಉಜ್ಜಿನಿ ಗ್ರಾಮದ ನಿವಾಸಿಯಾದ ಪೂಜಾ ಯು.ಎನ್. (24) ವಿದ್ಯಾರ್ಥಿನಿ ದಾವಣಗೆರೆ ಜಿಲ್ಲೆಯ ಜಗಳೂರಿನ ಸಿದ್ದಾರ್ಥ್ ಬಿಇಡಿ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದು ಓದುತ್ತಿದ್ದಳು. ಈ ನಡುವೆ ಪೂಜಾ ಬಿಇಡಿ ವ್ಯಾಸಂಗ ಬಿಟ್ಟು ಪಿಎಚ್ಡಿ ಮಾಡುತ್ತೇನೆ ಎಂದು ಪೋಷಕರಲ್ಲಿ ಹೇಳಿಕೊಂಡಿದ್ದಾಳೆ. ಪೋಷಕರು ಮೊದಲು ಈ ವ್ಯಾಸಂಗ ಮುಗಿಸಿದ ನಂತರ ಮುಂದಿನ ವ್ಯಾಸಂಗ ಮಾಡು ಎಂದು ತಿಳಿ ಹೇಳಿದ್ದರಿಂದ ಬೇಸರಗೊಂಡ ಯುವತಿ ಪೂಜಾ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಈ ಘಟನೆ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು