12:27 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ: ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ ಕೆಂಜಿಗೆ ಅಭಿಮತ

26/11/2025, 12:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು:ತೇಜಸ್ವಿ ಪ್ರತಿಷ್ಠಾನದ ಬೆಳವಣಿಗೆಗೆ ಪ್ರಾರಂಭದಿಂದಲೂ ಹಲವರು ಸಹಕಾರ ನೀಡುತ್ತಾ ಬಂದಿದ್ದು ಮುಂದೆಯೂ ಕೂಡ ಎಲ್ಲರ ಸಹಕಾರ ಅಗತ್ಯ ಎಂದು ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನೂತನ ಅಧ್ಯಕ್ಷ ಡಾ.ಪ್ರದೀಪ ಕೆಂಜಿಗೆ ಹೇಳಿದರು.
ಚಿಕ್ಕಮಗಳೂರಿನಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
೨೦೦೭ರಲ್ಲಿ ವಿಸ್ಮಯ ಪ್ರತಿಷ್ಠಾನದ ಎಂಬ ಹೆಸರಿನಿಂದ ಪ್ರಾರಂಭವಾಗಿ ಆ ನಂತರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಜೀವವೈವಿದ್ಯ ಸಂಶೋಧನಾ ಕೇಂದ್ರ ಎಂದಾಯಿತು. ಪ್ರಸ್ತುತ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನವಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಮಾತನಾಡಿ, ತೇಜಸ್ವಿ ಪ್ರತಿಷ್ಠಾನದ ದ್ಯೇಯ್ಯೋದ್ದೇಶಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸಿಕೊಂಡು ಬರಲಾಗುತ್ತಿದೆ. ಪ್ರತಿಷ್ಠಾನವು ನಿರಂತರ ಚಟುವಟಿಕೆಗಳ ಮೂಲಕ ಜ್ಞಾನಾಸಕ್ತರನ್ನು ತಲುಪುವಲ್ಲಿ ಸಕ್ರಿಯವಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಅವರು, ತೇಜಸ್ತಿ ಪ್ರತಿಷ್ಠಾನದ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿ, ನೂತನ ತಂಡದ ಮಾರ್ಗದರ್ಶನದಲ್ಲಿ ಇನ್ನಷ್ಟು ಸಕ್ರಿಯ ಹಾಗೂ ಸಾರ್ಥಕ ಕಾರ್ಯಕ್ರಮಗಳು ನಡೆಯಲಿ. ಜಿಲ್ಲಾಡಳಿತ ಪ್ರತಿಷ್ಠಾನದ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುತ್ತದೆ ಎಂದರು.
ಈ ಸಂದರ್ಭದಲ್ಲಿ ತೇಜಸ್ವಿ ಪ್ರತಿಷ್ಠಾನದ ನೂತನ ಅಧ್ಯಕ್ಷರಾದ ಡಾ.ಪ್ರದೀಪ ಕೆಂಜಿಗೆ ಸದಸ್ಯರಾದ ರಾಘವೇಂದ್ರ, ರವೀಶ್ ಕ್ಯಾತನಬೀಡು, ರುದ್ರಸ್ವಾಮಿ ಅವರನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಅಭಿನಂದಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಎಲೆಕ್ಟಿçÃಷಿಯನ್ ಶ್ರೀನಿವಾಸ್, ನವದೀಪ್, ಪೂರ್ಣೇಶ್, ಶಾಮಿಲಿ, ಮಲ್ಲಿಕ್, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಕೀಟತಜ್ಞ ಡಾ.ಅವಿನಾಶ್, ಲೇಖಕ ಪೂರ್ಣೇಶ್ ಮತ್ತಾವರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು