7:04 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಹೆಚ್ಚುತ್ತಿರುವ ಅಪಘಾತ: ವಾಹನಗಳಲ್ಲಿ ಎಲ್ಇಡಿ ಬಲ್ಬ್ ಕಡಿವಾಣಕ್ಕೆ ಆಗ್ರಹ

27/11/2025, 19:01

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಇತ್ತೀಚಿಗೆ ಹಲವು ವಾಹನಗಳಲ್ಲಿ ಹೆಚ್ಚಿನ ಬೆಳಕನ್ನು ಬೀರುವ ಎಲ್.ಇ.ಡಿ ಲೈಟ್ ಗಳ ಅಳವಡಿಕೆಯಿಂದ ಮುಂಭಾಗದಿಂದ ಬರುವ ವಾಹನಗಳಿಗೆ ಮುಂದೆ ದಾರಿ ಕಾಣದೆ ಅಪಘಾತಕ್ಕೆ ಒಳಗಾಗುವ ಹಲವು ಪ್ರಕರಣಗಳು ಜಿಲ್ಲೆಯಲ್ಲಿ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪ್ರವಾಸಿ ಜಿಲ್ಲೆಯಾದ ಕೊಡಗಿನಲ್ಲಿ ಐಷಾರಾಮಿ ವಾಹನಗಳಲ್ಲಿ ಸಂಚರಿಸುವವರು ಎಲ್.ಇ.ಡಿ ಬಲ್ಬ್ ಗಳ ಮೂಲಕ ಹೆಚ್ಚಿನ ಬೆಳಕಿನಿಂದ ಬಹಳಷ್ಟು ಅನಾಹುತಗಳು ಉಂಟಾಗುತ್ತಿವೆ. ಕುಶಾಲನಗರ ಮಡಿಕೇರಿ ವಿರಾಜಪೇಟೆ ಗೋಣಿಕೊಪ್ಪ ಪೊನ್ನoಪೇಟೆಗಳಲ್ಲಿ ಆಟೋಗಳಿಂದ ಹಿಡಿದು, ದೊಡ್ಡ ದೊಡ್ಡ ಐಷಾರಾಮಿ ವಾಹನಗಳಲ್ಲಿ ಎಲ್.ಇ.ಡಿ ಅಳವಡಿಸಿ ವೇಗವಾಗಿ ರಾತ್ರಿ ಸಂಚರಿಸುವ ದೃಶ್ಯ ಇದೀಗ ಹೆಚ್ಚಾಗಿದೆ. ಗೋಣಿಕೊಪ್ಪಲು, ಕೇರಳ ನಡುವೆ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ಹಲವು ವಾಹನಗಳು ಎಲ್.ಇ.ಡಿ ಲೈಟ್ ಗಳನ್ನು ಹೊಂದಿದ್ದು ಇದರಿಂದ ಈ ಭಾಗದಲ್ಲಿ ಹಲವು ಅಪಘಾತಗಳು ರಾತ್ರಿ ಸಮಯದಲ್ಲಿ ನಡೆಯಲು ಕಾರಣವಾಗಿದೆ.
ಕಾನೂನಿನಂತೆ ಎಲ್. ಇ.ಡಿ ಲೈಟ್ ಗಳನ್ನು ಬಳಸಿದರೆ ಪೊಲೀಸರು ಹೆಚ್ಚಿನ ಮೊತ್ತದ ದಂಡವನ್ನು ವಿಧಿಸಬಹುದಾಗಿದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಇದುವರೆಗೂ ನಡೆದಿಲ್ಲ. ಮಹಾರಾಷ್ಟ್ರ ಗುಜರಾತ್ ಗಳಲ್ಲಿ, ಪ್ರತಿನಿತ್ಯ ಈ ಬಗ್ಗೆ ತಪಾಸಣೆ ನಡೆಯುತ್ತಿದ್ದು ತಪ್ಪಿತಸ್ಥರಿಗೆ 50,000 ಸ್ಥಳದಲ್ಲಿ ದಂಡ ವಿಧಿಸುವ ಕಟ್ಟುನಿಟ್ಟಿನ ಕಾನೂನು ಜಾರಿಯಲ್ಲಿದೆ. ಕೊಡಗಿನ ಹಲವು ಭಾಗಗಳಲ್ಲಿ ರಾತ್ರಿ ಹೊತ್ತು ನಡೆಯುವ ಅಪಘಾತಕಗಳಲ್ಲಿ, ಹಿಟ್ ಅಂಡ್ ರನ್ ಕೇಸುಗಳು ಕೂಡ ಈಗ್ ಎಲ್ಇಡಿ ಲೈಟ್ ಹೆಚ್ಚಿನ ಬೆಳಕಿನಿಂದ ಮುಂದೆ ಸಾಗುವ ವಾಹನಗಳಿಗೆ ದಾರಿ ಕಾಣದೆ ಪಾದಚಾರಿಗಳಿಗೆ ಹಾಗೂ ಬೈಕ್ ಸವಾರರಿಗೆ ಗುದ್ದಿ ಹೋಗಿರುವ ಹಲವು ಪ್ರಕರಣಗಳು ನಮ್ಮ ಕಣ್ಣಮುಂದಿದೆ.
ಕೂಡಲೇ, ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು