4:38 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಹಿಂದಿ ಕಲಿತು ಬನ್ನಿ ಎಂದ ಯೂನಿಯನ್ ಬ್ಯಾಂಕ್ ಮೆನೇಜರ್ ಗೆ ತರಾಟೆ: ಕನ್ನಡಪರ ಸಂಘಟನೆಗಳಿಂದ ಭಾರಿ ಪ್ರತಿಭಟನೆ

02/09/2021, 10:29

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪಟ್ಟಣದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡದೆ ಕನ್ನಡಿಗರಿಗೆ ಹಿಂದಿ ಕಲಿತುಬನ್ನಿ ಎಂದು ಹೇಳುವ ಮೂಲಕ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.  

ಕನ್ನಡ ಮಾತನಾಡದ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ ಬ್ಯಾಂಕ್ ಮ್ಯಾನೆಜರ್ ಅವರನ್ನ ತಕ್ಷಣ ವರ್ಗಾವಣೆ ಮಾಡಿ ಕನ್ನಡಿಗ ಅಧಿಕಾಯನ್ನ ನೇಮಿಸುವಂತೆ ಆಗ್ರಹಿಸಿ  ಕನ್ನಡಪರ ಸಂಘಟನೆಗಳು ಯೂನಿಯನ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು.

ಇನ್ನೂ ಪ್ರತಿಭಟನಾ ಸ್ಥಳಕ್ಕೆ ಅಥಣಿ ಪಿಎಸ್ಐ ಕುಮಾರ್ ಹಾಡಕರ್ ಆಗಮಿಸಿ ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಕನ್ನಡದಲ್ಲಿ ವಿಚರಣಾ ಕೌಂಟರ್ ಮಾಡುವಂತೆ ತಿಳಿಸಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತೆ ಹೇಳಿ ಪರಿಸ್ಥಿತಿ ತಿಳಿಗೊಳಿಸಿದರು. 

ಇದೆ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಅಣ್ಣಾಸಾಬ ತೇಲಸಂಗ ಮಾತನಾಡಿ, ಕನ್ನಡಿಗರಿಗೆ ಅವಮಾನ ಮಾಡಿದ ಬ್ಯಾಂಕ್ ಮ್ಯಾನೇಜರ್ ಅವರನ್ನ ತಕ್ಷಣ ವರ್ಗಾವಣೆ ಮಾಡಬೇಕು ಮತ್ತು ಪ್ರತಿ ಬ್ಯಾಂಕ್ ಗಳಲ್ಲಿ ಶೇಕಡಾ ಅರವತ್ತರಷ್ಟು ಕನ್ನಡಿಗ ಸಿಬ್ಬಂದಿಗಳನ್ನ ನೇಮಿಸುವಂತೆ ರಾಜ್ಯ ಸರ್ಕಾರವನ್ನ ಆಗ್ರಹಿಸಿದರು.

ಇನ್ನೂ ಬ್ಯಾಂಕ್ ಮ್ಯಾನೇಜರ್ ಜೈ ಕರ್ನಾಟಕ ಎಂದು ಘೋಷಣೆ ಕೂಗಿ ಆದಷ್ಟು ಬೇಗನೆ ಕನ್ನಡ ಭಾಷೆ ಕಲಿಯುವುದಾಗಿ ತಿಳಿಸಿ ಕ್ಷಮೆ ಕೇಳಿದ್ದರಿಂದ ಪ್ರತಿಭಟನೆ ಹಿಂಪಡೆಯಲಾಯಿತು

ಇದೇ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಪದಾಧಿಕಾರಿಗಳಾದ ದೀಪಕ ಬುರ್ಲಿ, ಚಿದಾನಂದ ಶೇಗುಣಶಿ, ಶಶಿಧರ ಬರ್ಲಿ, ಜಗನ್ನಾಥ ಬಾಮನೆ, ದೀಪಕ್ ಸಿಂಧೆ, ಮಹಾಂತೇಶ ಬಾಡಗಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು