11:17 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಹಿಂದಿ ಕಲಿತು ಬನ್ನಿ ಎಂದ ಯೂನಿಯನ್ ಬ್ಯಾಂಕ್ ಮೆನೇಜರ್ ಗೆ ತರಾಟೆ: ಕನ್ನಡಪರ ಸಂಘಟನೆಗಳಿಂದ ಭಾರಿ ಪ್ರತಿಭಟನೆ

02/09/2021, 10:29

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪಟ್ಟಣದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡದೆ ಕನ್ನಡಿಗರಿಗೆ ಹಿಂದಿ ಕಲಿತುಬನ್ನಿ ಎಂದು ಹೇಳುವ ಮೂಲಕ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.  

ಕನ್ನಡ ಮಾತನಾಡದ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ ಬ್ಯಾಂಕ್ ಮ್ಯಾನೆಜರ್ ಅವರನ್ನ ತಕ್ಷಣ ವರ್ಗಾವಣೆ ಮಾಡಿ ಕನ್ನಡಿಗ ಅಧಿಕಾಯನ್ನ ನೇಮಿಸುವಂತೆ ಆಗ್ರಹಿಸಿ  ಕನ್ನಡಪರ ಸಂಘಟನೆಗಳು ಯೂನಿಯನ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು.

ಇನ್ನೂ ಪ್ರತಿಭಟನಾ ಸ್ಥಳಕ್ಕೆ ಅಥಣಿ ಪಿಎಸ್ಐ ಕುಮಾರ್ ಹಾಡಕರ್ ಆಗಮಿಸಿ ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಕನ್ನಡದಲ್ಲಿ ವಿಚರಣಾ ಕೌಂಟರ್ ಮಾಡುವಂತೆ ತಿಳಿಸಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತೆ ಹೇಳಿ ಪರಿಸ್ಥಿತಿ ತಿಳಿಗೊಳಿಸಿದರು. 

ಇದೆ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಅಣ್ಣಾಸಾಬ ತೇಲಸಂಗ ಮಾತನಾಡಿ, ಕನ್ನಡಿಗರಿಗೆ ಅವಮಾನ ಮಾಡಿದ ಬ್ಯಾಂಕ್ ಮ್ಯಾನೇಜರ್ ಅವರನ್ನ ತಕ್ಷಣ ವರ್ಗಾವಣೆ ಮಾಡಬೇಕು ಮತ್ತು ಪ್ರತಿ ಬ್ಯಾಂಕ್ ಗಳಲ್ಲಿ ಶೇಕಡಾ ಅರವತ್ತರಷ್ಟು ಕನ್ನಡಿಗ ಸಿಬ್ಬಂದಿಗಳನ್ನ ನೇಮಿಸುವಂತೆ ರಾಜ್ಯ ಸರ್ಕಾರವನ್ನ ಆಗ್ರಹಿಸಿದರು.

ಇನ್ನೂ ಬ್ಯಾಂಕ್ ಮ್ಯಾನೇಜರ್ ಜೈ ಕರ್ನಾಟಕ ಎಂದು ಘೋಷಣೆ ಕೂಗಿ ಆದಷ್ಟು ಬೇಗನೆ ಕನ್ನಡ ಭಾಷೆ ಕಲಿಯುವುದಾಗಿ ತಿಳಿಸಿ ಕ್ಷಮೆ ಕೇಳಿದ್ದರಿಂದ ಪ್ರತಿಭಟನೆ ಹಿಂಪಡೆಯಲಾಯಿತು

ಇದೇ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಪದಾಧಿಕಾರಿಗಳಾದ ದೀಪಕ ಬುರ್ಲಿ, ಚಿದಾನಂದ ಶೇಗುಣಶಿ, ಶಶಿಧರ ಬರ್ಲಿ, ಜಗನ್ನಾಥ ಬಾಮನೆ, ದೀಪಕ್ ಸಿಂಧೆ, ಮಹಾಂತೇಶ ಬಾಡಗಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು