5:57 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹಿಂದಿ ಕಲಿತು ಬನ್ನಿ ಎಂದ ಯೂನಿಯನ್ ಬ್ಯಾಂಕ್ ಮೆನೇಜರ್ ಗೆ ತರಾಟೆ: ಕನ್ನಡಪರ ಸಂಘಟನೆಗಳಿಂದ ಭಾರಿ ಪ್ರತಿಭಟನೆ

02/09/2021, 10:29

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪಟ್ಟಣದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡದೆ ಕನ್ನಡಿಗರಿಗೆ ಹಿಂದಿ ಕಲಿತುಬನ್ನಿ ಎಂದು ಹೇಳುವ ಮೂಲಕ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.  

ಕನ್ನಡ ಮಾತನಾಡದ ಮತ್ತು ಕನ್ನಡಿಗರಿಗೆ ಅವಮಾನ ಮಾಡಿದ ಬ್ಯಾಂಕ್ ಮ್ಯಾನೆಜರ್ ಅವರನ್ನ ತಕ್ಷಣ ವರ್ಗಾವಣೆ ಮಾಡಿ ಕನ್ನಡಿಗ ಅಧಿಕಾಯನ್ನ ನೇಮಿಸುವಂತೆ ಆಗ್ರಹಿಸಿ  ಕನ್ನಡಪರ ಸಂಘಟನೆಗಳು ಯೂನಿಯನ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದರು.

ಇನ್ನೂ ಪ್ರತಿಭಟನಾ ಸ್ಥಳಕ್ಕೆ ಅಥಣಿ ಪಿಎಸ್ಐ ಕುಮಾರ್ ಹಾಡಕರ್ ಆಗಮಿಸಿ ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಕನ್ನಡದಲ್ಲಿ ವಿಚರಣಾ ಕೌಂಟರ್ ಮಾಡುವಂತೆ ತಿಳಿಸಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತೆ ಹೇಳಿ ಪರಿಸ್ಥಿತಿ ತಿಳಿಗೊಳಿಸಿದರು. 

ಇದೆ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಅಣ್ಣಾಸಾಬ ತೇಲಸಂಗ ಮಾತನಾಡಿ, ಕನ್ನಡಿಗರಿಗೆ ಅವಮಾನ ಮಾಡಿದ ಬ್ಯಾಂಕ್ ಮ್ಯಾನೇಜರ್ ಅವರನ್ನ ತಕ್ಷಣ ವರ್ಗಾವಣೆ ಮಾಡಬೇಕು ಮತ್ತು ಪ್ರತಿ ಬ್ಯಾಂಕ್ ಗಳಲ್ಲಿ ಶೇಕಡಾ ಅರವತ್ತರಷ್ಟು ಕನ್ನಡಿಗ ಸಿಬ್ಬಂದಿಗಳನ್ನ ನೇಮಿಸುವಂತೆ ರಾಜ್ಯ ಸರ್ಕಾರವನ್ನ ಆಗ್ರಹಿಸಿದರು.

ಇನ್ನೂ ಬ್ಯಾಂಕ್ ಮ್ಯಾನೇಜರ್ ಜೈ ಕರ್ನಾಟಕ ಎಂದು ಘೋಷಣೆ ಕೂಗಿ ಆದಷ್ಟು ಬೇಗನೆ ಕನ್ನಡ ಭಾಷೆ ಕಲಿಯುವುದಾಗಿ ತಿಳಿಸಿ ಕ್ಷಮೆ ಕೇಳಿದ್ದರಿಂದ ಪ್ರತಿಭಟನೆ ಹಿಂಪಡೆಯಲಾಯಿತು

ಇದೇ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಪದಾಧಿಕಾರಿಗಳಾದ ದೀಪಕ ಬುರ್ಲಿ, ಚಿದಾನಂದ ಶೇಗುಣಶಿ, ಶಶಿಧರ ಬರ್ಲಿ, ಜಗನ್ನಾಥ ಬಾಮನೆ, ದೀಪಕ್ ಸಿಂಧೆ, ಮಹಾಂತೇಶ ಬಾಡಗಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು