6:48 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

28/11/2025, 14:06

ಉಡುಪಿ(reporterkarnataka.com): ಪರ್ಯಾಯ ಪುತ್ತಿಗೆ ಮಠ ಆಯೋಜಿಸಿರುವ ‘ಲಕ್ಷ ಕಂಠ ಗೀತಾ ಪಾರಾಯಣ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ‘ಜೈ ಶ್ರೀಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು.


ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟನೆ ಮಾಡಿದ್ದಾರೆ.
ಉಡುಪಿಯ ರಥ ಬೀದಿಯಲ್ಲಿ ಅದ್ದೂರಿ ರೋಡ್ ಶೋ ಮಾಡಿದ ಪ್ರಧಾನಿ ಮೋದಿ ಕನಕ ಗೋಪುರದ ಮುಂದೆ ಇಳಿದು ಅಷ್ಟಮಠಗಳನ್ನು ವೀಕ್ಷಿಸುತ್ತಾ ಕನಕದಾಸರ ಪುತ್ತಳಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣನ ದರ್ಶನ ಮಾಡಿ ನಂತರ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದರು.
ಕೃಷ್ಣ ಮಠದ ಮುಖ್ಯದ್ವಾರದ ಮೂಲಕ ಪ್ರವೇಶಿಸಿದ ಪ್ರಧಾನಿ ಮೋದಿಗೆ ಪೂರ್ಣ ಕುಂಭದ ಸ್ವಾಗತ ಮಾಡಲಾಗಿದ್ದು, ಬಳಿಕ ಮಧ್ವ ಸರೋವರಕ್ಕೆ ತೆರಳಿ ತೀರ್ಥ ಪ್ರೋಕ್ಷಣೆ ಮಾಡಿಕೊಂಡು ಮಠದೊಳಗೆ ತೆರಳಿದ್ದರು.
ದೇವಸ್ಥಾನದ ಒಳಗೆ ಪ್ರವೇಶಿಸಿದ ಪ್ರಧಾನಿ ಮೋದಿ ದೀಪ ಬೆಳಗುವ ಮೂಲಕ ಸ್ವರ್ಣ ಲೇಪಿತ ತೀರ್ಥ ಮಂಟಪ ಉದ್ಘಾಟಿಸಿದರು. ಈ ವೇಳೆ ಮಠಾಧೀಶರು ಗಣ್ಯರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು