3:17 PM Friday28 - November 2025
ಬ್ರೇಕಿಂಗ್ ನ್ಯೂಸ್
Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ

ಇತ್ತೀಚಿನ ಸುದ್ದಿ

Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

28/11/2025, 14:06

ಉಡುಪಿ(reporterkarnataka.com): ಪರ್ಯಾಯ ಪುತ್ತಿಗೆ ಮಠ ಆಯೋಜಿಸಿರುವ ‘ಲಕ್ಷ ಕಂಠ ಗೀತಾ ಪಾರಾಯಣ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ‘ಜೈ ಶ್ರೀಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು.


ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟನೆ ಮಾಡಿದ್ದಾರೆ.
ಉಡುಪಿಯ ರಥ ಬೀದಿಯಲ್ಲಿ ಅದ್ದೂರಿ ರೋಡ್ ಶೋ ಮಾಡಿದ ಪ್ರಧಾನಿ ಮೋದಿ ಕನಕ ಗೋಪುರದ ಮುಂದೆ ಇಳಿದು ಅಷ್ಟಮಠಗಳನ್ನು ವೀಕ್ಷಿಸುತ್ತಾ ಕನಕದಾಸರ ಪುತ್ತಳಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣನ ದರ್ಶನ ಮಾಡಿ ನಂತರ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದರು.
ಕೃಷ್ಣ ಮಠದ ಮುಖ್ಯದ್ವಾರದ ಮೂಲಕ ಪ್ರವೇಶಿಸಿದ ಪ್ರಧಾನಿ ಮೋದಿಗೆ ಪೂರ್ಣ ಕುಂಭದ ಸ್ವಾಗತ ಮಾಡಲಾಗಿದ್ದು, ಬಳಿಕ ಮಧ್ವ ಸರೋವರಕ್ಕೆ ತೆರಳಿ ತೀರ್ಥ ಪ್ರೋಕ್ಷಣೆ ಮಾಡಿಕೊಂಡು ಮಠದೊಳಗೆ ತೆರಳಿದ್ದರು.
ದೇವಸ್ಥಾನದ ಒಳಗೆ ಪ್ರವೇಶಿಸಿದ ಪ್ರಧಾನಿ ಮೋದಿ ದೀಪ ಬೆಳಗುವ ಮೂಲಕ ಸ್ವರ್ಣ ಲೇಪಿತ ತೀರ್ಥ ಮಂಟಪ ಉದ್ಘಾಟಿಸಿದರು. ಈ ವೇಳೆ ಮಠಾಧೀಶರು ಗಣ್ಯರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು