9:06 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

Sports | ಚೆಸ್: ವಾಗ್ದೇವಿ ಪಿಯು ಕಾಲೇಜಿನ ಸಾತ್ವಿಕ್ ಎ. ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

28/11/2025, 18:54

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail com

ಬೆಂಗಳೂರಿನಲ್ಲಿ ನಡೆದ ಬಾಲ-ಬಾಲಕಿಯರ ಕರ್ನಾಟಕ ಸ್ಟೇಟ್ ಚೆಸ್ ಚಾಂಪಿಯನ್ ಷಿಪ್ 2025-26 ಪಂದ್ಯಾವಳಿಯಲ್ಲಿ ವಾಗ್ದೇವಿ ಪಿಯು ಕಾಲೇಜಿನ ಸಾತ್ವಿಕ್ ಎ. ಶೆಟ್ಟಿ (ದ್ವಿತೀಯ ಪಿಯು ವಿಜ್ಞಾನ ವಿಭಾಗ) ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಈತ ಬೆಟ್ಟಮಕ್ಕಿ ನಿವಾಸಿಗಳಾದ ಸುಮನಾ ಮತ್ತು ಅಶೋಕ ದಂಪತಿಯ ಪುತ್ರ.ಶಿಕ್ಷಕ ದಂಪತಿಯ ಮಗನಾದ ಈತ ಓದಿನಲ್ಲಿಯೂ ಅತ್ಯಂತ ಪ್ರತಿಭಾನ್ವಿತ, ನಿರಂತರ 12 ವರ್ಷಗಳಿಂದ ಚೆಸ್ ಆಟವನ್ನು ಅತ್ಯಂತ ಆಸಕ್ತಿಯಿಂದ ಆಡುತ್ತಾ ಬಂದಿದ್ದು, SGFI ( ಸ್ಕೂಲ್ ಗೇಮ್ ಫೆಡರೇಷನ್ ಅಫ್ ಇಂಡಿಯಾ) ನಲ್ಲಿ ಸತತ ಎರಡನೆಯ ಬಾರಿಗೆ ರಾಷ್ಟ್ರಮಟ್ಟವನ್ನು ಪ್ರತಿನಿಧಿಸುತ್ತಿದ್ದಾನೆ. ಈ ವರ್ಷ ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ತೆರಳುತ್ತಿದ್ದಾನೆ.
ವಿದ್ಯಾರ್ಥಿಯ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕವೃಂದ ಮತ್ತು ಪೋಷಕರು ಅಭಿನಂದಿಸಿ ರಾಷ್ಟ್ರಮಟ್ಟದಲ್ಲಿ ಚಿನ್ನವನ್ನು ಪಡೆದುಕೊಳ್ಳಲಿ ಎಂದು ಶುಭಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು