2:30 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

Sports | ಚೆಸ್: ವಾಗ್ದೇವಿ ಪಿಯು ಕಾಲೇಜಿನ ಸಾತ್ವಿಕ್ ಎ. ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

28/11/2025, 18:54

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail com

ಬೆಂಗಳೂರಿನಲ್ಲಿ ನಡೆದ ಬಾಲ-ಬಾಲಕಿಯರ ಕರ್ನಾಟಕ ಸ್ಟೇಟ್ ಚೆಸ್ ಚಾಂಪಿಯನ್ ಷಿಪ್ 2025-26 ಪಂದ್ಯಾವಳಿಯಲ್ಲಿ ವಾಗ್ದೇವಿ ಪಿಯು ಕಾಲೇಜಿನ ಸಾತ್ವಿಕ್ ಎ. ಶೆಟ್ಟಿ (ದ್ವಿತೀಯ ಪಿಯು ವಿಜ್ಞಾನ ವಿಭಾಗ) ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಈತ ಬೆಟ್ಟಮಕ್ಕಿ ನಿವಾಸಿಗಳಾದ ಸುಮನಾ ಮತ್ತು ಅಶೋಕ ದಂಪತಿಯ ಪುತ್ರ.ಶಿಕ್ಷಕ ದಂಪತಿಯ ಮಗನಾದ ಈತ ಓದಿನಲ್ಲಿಯೂ ಅತ್ಯಂತ ಪ್ರತಿಭಾನ್ವಿತ, ನಿರಂತರ 12 ವರ್ಷಗಳಿಂದ ಚೆಸ್ ಆಟವನ್ನು ಅತ್ಯಂತ ಆಸಕ್ತಿಯಿಂದ ಆಡುತ್ತಾ ಬಂದಿದ್ದು, SGFI ( ಸ್ಕೂಲ್ ಗೇಮ್ ಫೆಡರೇಷನ್ ಅಫ್ ಇಂಡಿಯಾ) ನಲ್ಲಿ ಸತತ ಎರಡನೆಯ ಬಾರಿಗೆ ರಾಷ್ಟ್ರಮಟ್ಟವನ್ನು ಪ್ರತಿನಿಧಿಸುತ್ತಿದ್ದಾನೆ. ಈ ವರ್ಷ ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ತೆರಳುತ್ತಿದ್ದಾನೆ.
ವಿದ್ಯಾರ್ಥಿಯ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕವೃಂದ ಮತ್ತು ಪೋಷಕರು ಅಭಿನಂದಿಸಿ ರಾಷ್ಟ್ರಮಟ್ಟದಲ್ಲಿ ಚಿನ್ನವನ್ನು ಪಡೆದುಕೊಳ್ಳಲಿ ಎಂದು ಶುಭಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು