7:43 PM Friday28 - November 2025
ಬ್ರೇಕಿಂಗ್ ನ್ಯೂಸ್
Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

Chikkamagaluru | ಬಂಪರ್ ಬೆಲೆಯ ನಡುವೆ ಮಂಗಗಳ ಕಾಟ: ಕಂಗಾಲಾದ ಕಾಫಿ ಬೆಳೆಗಾರರು

28/11/2025, 19:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ಬಾರಿಯ ನಿರಂತರ ಮಳೆ ಮತ್ತು ಅವಧಿಗೂ ಮುನ್ನವೇ ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳನ್ನು ಮಂಗಗಳು ನಾಶ ಮಾಡುತ್ತಿರುವುದರಿಂದ ಮಲೆನಾಡಿನ ಕಾಫಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.


ಒಂದೆಡೆ ಉತ್ತಮ ಬೆಲೆ ದೊರೆಯುತ್ತಿದ್ದರೂ, ಇಳುವರಿಯನ್ನು ಉಳಿಸಿಕೊಳ್ಳುವುದು ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಪ್ರಸಕ್ತ ವರ್ಷ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದರ ಪರಿಣಾಮವಾಗಿ ಕಾಫಿ ಹಣ್ಣುಗಳು ಅವಧಿಗೂ ಮುನ್ನವೇ ಕೊಯ್ಲಿಗೆ ಬಂದಿವೆ. ಸರಿಯಾದ ಸಮಯಕ್ಕೆ ಕೊಯ್ಲು ಮಾಡದಿದ್ದರೆ ಕಾಫಿ ಹಣ್ಣುಗಳು ಉದುರಿ ಹೋಗುವ ಆತಂಕ ಬೆಳೆಗಾರರನ್ನು ಕಾಡುತ್ತಿದೆ. ಮತ್ತೊಂದೆಡೆ, ಕಾಫಿ ಕೊಯ್ಲು ಮಾಡಲು ಅಗತ್ಯವಿರುವ ಕಾರ್ಮಿಕರ ಕೊರತೆ ತೀವ್ರವಾಗಿದ್ದು, ಬೆಳೆಗಾರರು ಹೈರಾಣಾಗಿದ್ದಾರೆ. ಈ ಎಲ್ಲ ಸಮಸ್ಯೆಗಳ ನಡುವೆ, ತೋಟಗಳಲ್ಲಿ ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳನ್ನು ಮಂಗಗಳು ಗುಂಪುಗುಂಪಾಗಿ ಬಂದು ತಿಂದು ನಾಶ ಮಾಡುತ್ತಿವೆ. ಮಲೆನಾಡಿನ ಬಹುತೇಕ ಕಾಫಿ ತೋಟಗಳಲ್ಲಿ ಇದೇ ಪರಿಸ್ಥಿತಿ ಕಂಡು ಬರುತ್ತಿದೆ. ಕೆಜಿಗಟ್ಟಲೆ ಕಾಫಿ ಹಣ್ಣುಗಳು ಪ್ರತಿದಿನ ಮಂಗಗಳ ಪಾಲಾಗುತ್ತಿದ್ದು, ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿಯುವ ಭೀತಿ ಎದುರಾಗಿದೆ. ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಕಾಫಿ ಬೆಳೆಗಾರರು ಶ್ರಮಿಸುತ್ತಿದ್ದಾರೆ. ಮಂಗಗಳನ್ನು ಓಡಿಸಲು ದಿನವಿಡೀ ಪಟಾಕಿಗಳನ್ನು ಸಿಡಿಸುವುದು, ತೋಟದ ಸುತ್ತ ಕಾವಲು ಕಾಯುವಂತಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ, ಮಂಗಗಳ ಸಂಖ್ಯೆ ಹೆಚ್ಚಿರುವುದರಿಂದ ಈ ಪ್ರಯತ್ನಗಳು ಅಷ್ಟಾಗಿ ಫಲ ನೀಡುತ್ತಿಲ್ಲ. ಒಂದೆಡೆ ಕಾಫಿಗೆ ಈ ಬಾರಿಯೂ ಬಂಪರ್ ಬೆಲೆ ದೊರೆಯುವ ನಿರೀಕ್ಷೆ ಇರುವುದರಿಂದ, ಕಷ್ಟಪಟ್ಟು ಬೆಳೆದ ಬೆಳೆಯನ್ನು ಮಂಗಗಳಿಗೆ ಆಹಾರವಾಗಲು ಬಿಡಲಾಗದೆ ಬೆಳೆಗಾರರು ಆರ್ಥಿಕ ನಷ್ಟದ ಜೊತೆಗೆ ಮಾನಸಿಕ ಒತ್ತಡವನ್ನೂ ಎದುರಿಸುವಂತಾಗಿದೆ.
ಕಾಫಿ ಬೆಳಗೆ ಉತ್ತಮ ಬೆಲೆ ಬಂದಿದ್ದು. ರೈತರು ಕಾಫಿ ಕೊಯ್ಲು ಶುರು ಮಾಡಿಕೊಂಡಿದ್ದರೆ ಮಲೆನಾಡಿನಲ್ಲಿ ಕೋತಿಗಳ ಕಾಟ ಅತಿಯಾಗಿದ್ದು ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸಾಹಸವಾಗಿದೆ. ಕೋತಿಗಳು ಗುಂಪು ಗುಂಪಾಗಿ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ಕಾಫಿ ಬೆಳೆ ಉಳಿಸಿಕೊಳ್ಳುವುದು ಕಷ್ಟಕರವಾಗಿದೆ.
ಮಧು ಕುಮಾರ್. ಕಾಫಿತೋಟದ ಮಾಲೀಕರು
ಗ್ರಾಮ ಪಂಚಾಯತ್ ಸದಸ್ಯರು ಬಣಕಲ್

ಇತ್ತೀಚಿನ ಸುದ್ದಿ

ಜಾಹೀರಾತು