2:31 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ತರೀಕೆರೆ: ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿಗೆ ಚಿರತೆ ಸಾವು; ಪ್ರಾಣಿಪ್ರಿಯರ ಆಕ್ರೋಶ

30/11/2025, 15:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿರತೆ ಸೆರೆ ವೇಳೆ ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿನಿಂದ ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದ್ದು, ಇದು ಅಧಿಕಾರಿಗಳೇ ಮಾಡಿದ ಕೊಲೆ ಎಂದು ಪ್ರಾಣಿಪ್ರಿಯರು ಹಾಗೂ ಪರಿಸರವಾದಿಗಳು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ತರೀಕೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಮನೆ ಬಳಿಯಿದ್ದ 11 ವರ್ಷದ ಯುವಕನ ಮೇಲೆ ಚಿರತೆ ದಾಳಿ ಮಾಡಿತ್ತು. ತೀವ್ರ ಗಾಯಗೊಂಡಿದ್ದ ಯುವಕನನ್ನು ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 11 ವರ್ಷದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದನು. ಆದರೆ, ಚಿರತೆಯ ಸೇವೆಗೆ ಅರಣ್ಯ ಇಲಾಖೆ ಮುಂದಾಗಿತ್ತು. ಇಂದು ಬೈರಾಪುರ ಗ್ರಾಮದಲ್ಲಿ ಚಿರತೆ ಇರುವುದನ್ನ ಖಚಿತ ಪಡಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೇರಿಗೆ ಮುಂದಾಗಿದ್ದರು. ಈ ವೇಳೆ ಗಿಡ-ಘಂಟೆಗಳ ಮಧ್ಯೆಯಿಂದ ಚಿರತೆ ಹಾರಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಆತ್ಮ ರಕ್ಷಣೆಗಾಗಿ ಚಿರತೆಯ ಮೇಲೆ ಗುಂಡು ಹಾರಿಸಿದ್ದಾರೆ. ಆದರೆ, ಚಿರತೆ ತಪ್ಪಿಸಿಕೊಂಡಿತ್ತು. ಅಧಿಕಾರಿಗಳು ಚಿರತೆಗಾಗಿ ಹುಡುಕಾಡಿದ ಮೇಲೆ ಚಿರತೆಯ ಮೃತದೇಹ ಪತ್ತೆಯಾಗಿತ್ತು. ಚಿರತೆಯ ದೇಹದ ಮೇಲೆ ಗುಂಡಿನ ಗುರುತು ಇದ್ದು, ಇದು ಅಧಿಕಾರಿಗಳೇ ಮಾಡಿದ ಕೊಲೆ ಎಂದು ಸ್ಥಳೀಯರು, ಪ್ರಾಣಿ ಪ್ರಿಯರು ಹಾಗೂ ಪರಿಸರವಾದಿಗಳು ಆರೋಪಿಸಿದ್ದಾರೆ. ಕಳೆದ ಒಂದು ವಾರದ ಹಿಂದಷ್ಟೇ ತರೀಕೆರೆ ತಾಲೂಕಿನ ಮುಂಡ್ರೆ ಗ್ರಾಮದ ಬಳಿ ಕೊಟ್ಟಿಗೆಯಲ್ಲಿದ್ದ 5 ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದಿತ್ತು. ನಿನ್ನೆ ಮತ್ತೊಬ್ಬ ಯುವಕನ ಮೇಲೆ ದಾಳಿ ಮಾಡಿದ್ದು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದ ರೈತರು ಚಿರತೆ ಹಾವಳಿಯಿಂದ ಹೈರಾಣಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು