3:11 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ…

ಇತ್ತೀಚಿನ ಸುದ್ದಿ

ತರೀಕೆರೆ: ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿಗೆ ಚಿರತೆ ಸಾವು; ಪ್ರಾಣಿಪ್ರಿಯರ ಆಕ್ರೋಶ

30/11/2025, 15:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿರತೆ ಸೆರೆ ವೇಳೆ ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿನಿಂದ ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದ್ದು, ಇದು ಅಧಿಕಾರಿಗಳೇ ಮಾಡಿದ ಕೊಲೆ ಎಂದು ಪ್ರಾಣಿಪ್ರಿಯರು ಹಾಗೂ ಪರಿಸರವಾದಿಗಳು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ತರೀಕೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಮನೆ ಬಳಿಯಿದ್ದ 11 ವರ್ಷದ ಯುವಕನ ಮೇಲೆ ಚಿರತೆ ದಾಳಿ ಮಾಡಿತ್ತು. ತೀವ್ರ ಗಾಯಗೊಂಡಿದ್ದ ಯುವಕನನ್ನು ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 11 ವರ್ಷದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದನು. ಆದರೆ, ಚಿರತೆಯ ಸೇವೆಗೆ ಅರಣ್ಯ ಇಲಾಖೆ ಮುಂದಾಗಿತ್ತು. ಇಂದು ಬೈರಾಪುರ ಗ್ರಾಮದಲ್ಲಿ ಚಿರತೆ ಇರುವುದನ್ನ ಖಚಿತ ಪಡಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೇರಿಗೆ ಮುಂದಾಗಿದ್ದರು. ಈ ವೇಳೆ ಗಿಡ-ಘಂಟೆಗಳ ಮಧ್ಯೆಯಿಂದ ಚಿರತೆ ಹಾರಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಆತ್ಮ ರಕ್ಷಣೆಗಾಗಿ ಚಿರತೆಯ ಮೇಲೆ ಗುಂಡು ಹಾರಿಸಿದ್ದಾರೆ. ಆದರೆ, ಚಿರತೆ ತಪ್ಪಿಸಿಕೊಂಡಿತ್ತು. ಅಧಿಕಾರಿಗಳು ಚಿರತೆಗಾಗಿ ಹುಡುಕಾಡಿದ ಮೇಲೆ ಚಿರತೆಯ ಮೃತದೇಹ ಪತ್ತೆಯಾಗಿತ್ತು. ಚಿರತೆಯ ದೇಹದ ಮೇಲೆ ಗುಂಡಿನ ಗುರುತು ಇದ್ದು, ಇದು ಅಧಿಕಾರಿಗಳೇ ಮಾಡಿದ ಕೊಲೆ ಎಂದು ಸ್ಥಳೀಯರು, ಪ್ರಾಣಿ ಪ್ರಿಯರು ಹಾಗೂ ಪರಿಸರವಾದಿಗಳು ಆರೋಪಿಸಿದ್ದಾರೆ. ಕಳೆದ ಒಂದು ವಾರದ ಹಿಂದಷ್ಟೇ ತರೀಕೆರೆ ತಾಲೂಕಿನ ಮುಂಡ್ರೆ ಗ್ರಾಮದ ಬಳಿ ಕೊಟ್ಟಿಗೆಯಲ್ಲಿದ್ದ 5 ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದಿತ್ತು. ನಿನ್ನೆ ಮತ್ತೊಬ್ಬ ಯುವಕನ ಮೇಲೆ ದಾಳಿ ಮಾಡಿದ್ದು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದ ರೈತರು ಚಿರತೆ ಹಾವಳಿಯಿಂದ ಹೈರಾಣಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು