8:13 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ತರೀಕೆರೆ: ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿಗೆ ಚಿರತೆ ಸಾವು; ಪ್ರಾಣಿಪ್ರಿಯರ ಆಕ್ರೋಶ

30/11/2025, 15:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿರತೆ ಸೆರೆ ವೇಳೆ ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿನಿಂದ ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದ್ದು, ಇದು ಅಧಿಕಾರಿಗಳೇ ಮಾಡಿದ ಕೊಲೆ ಎಂದು ಪ್ರಾಣಿಪ್ರಿಯರು ಹಾಗೂ ಪರಿಸರವಾದಿಗಳು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ತರೀಕೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಮನೆ ಬಳಿಯಿದ್ದ 11 ವರ್ಷದ ಯುವಕನ ಮೇಲೆ ಚಿರತೆ ದಾಳಿ ಮಾಡಿತ್ತು. ತೀವ್ರ ಗಾಯಗೊಂಡಿದ್ದ ಯುವಕನನ್ನು ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 11 ವರ್ಷದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದನು. ಆದರೆ, ಚಿರತೆಯ ಸೇವೆಗೆ ಅರಣ್ಯ ಇಲಾಖೆ ಮುಂದಾಗಿತ್ತು. ಇಂದು ಬೈರಾಪುರ ಗ್ರಾಮದಲ್ಲಿ ಚಿರತೆ ಇರುವುದನ್ನ ಖಚಿತ ಪಡಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೇರಿಗೆ ಮುಂದಾಗಿದ್ದರು. ಈ ವೇಳೆ ಗಿಡ-ಘಂಟೆಗಳ ಮಧ್ಯೆಯಿಂದ ಚಿರತೆ ಹಾರಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಆತ್ಮ ರಕ್ಷಣೆಗಾಗಿ ಚಿರತೆಯ ಮೇಲೆ ಗುಂಡು ಹಾರಿಸಿದ್ದಾರೆ. ಆದರೆ, ಚಿರತೆ ತಪ್ಪಿಸಿಕೊಂಡಿತ್ತು. ಅಧಿಕಾರಿಗಳು ಚಿರತೆಗಾಗಿ ಹುಡುಕಾಡಿದ ಮೇಲೆ ಚಿರತೆಯ ಮೃತದೇಹ ಪತ್ತೆಯಾಗಿತ್ತು. ಚಿರತೆಯ ದೇಹದ ಮೇಲೆ ಗುಂಡಿನ ಗುರುತು ಇದ್ದು, ಇದು ಅಧಿಕಾರಿಗಳೇ ಮಾಡಿದ ಕೊಲೆ ಎಂದು ಸ್ಥಳೀಯರು, ಪ್ರಾಣಿ ಪ್ರಿಯರು ಹಾಗೂ ಪರಿಸರವಾದಿಗಳು ಆರೋಪಿಸಿದ್ದಾರೆ. ಕಳೆದ ಒಂದು ವಾರದ ಹಿಂದಷ್ಟೇ ತರೀಕೆರೆ ತಾಲೂಕಿನ ಮುಂಡ್ರೆ ಗ್ರಾಮದ ಬಳಿ ಕೊಟ್ಟಿಗೆಯಲ್ಲಿದ್ದ 5 ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದಿತ್ತು. ನಿನ್ನೆ ಮತ್ತೊಬ್ಬ ಯುವಕನ ಮೇಲೆ ದಾಳಿ ಮಾಡಿದ್ದು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದ ರೈತರು ಚಿರತೆ ಹಾವಳಿಯಿಂದ ಹೈರಾಣಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು