2:34 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

30/11/2025, 20:42

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ 3 ಲಕ್ಷಕ್ಕೂ ಹೆಚ್ಚಿದೆ. 1882 ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ. ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ , ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ ಎಂದರು. ಮೂಲತ: ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದರು.
ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣಗೌಡರು, ನನಗೆ ಪರಿಚಿತರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದರು.
ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂ.ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ 50 ಲಕ್ಷ ರೂ.ಬೇಡಿಕೆಯನ್ನು ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.


ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು ಎಂದು ಭರವಸೆಯಿತ್ತರು.
ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಡಾಧಾರ, ಯು. ಪಿ.ಶಿವಾನಂದ ಹಾಗೂ ಡಿ.ಎಸ್.ಆನಂದ ಅವರಿಗೆ ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು