3:24 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

Chikkamagaluru | ಮನೆಯಲ್ಲೇ ವಿವಾಹಿತ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ

02/12/2025, 20:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲೇ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದ ಭಯಾನಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಅರೆನೂರು ಗ್ರಾಮದಲ್ಲಿ ನಡೆದಿದೆ.
ಸಂಧ್ಯಾ (33) ಹತ್ಯೆಯಾದ ಮೃತ ದುರ್ದೈವಿ. ಸಂಧ್ಯಾ ಅವರ ಕುತ್ತಿಗೆಗೆ ಚಾಕುವಿನಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಮಹಿಳೆ ಮನೆ ಹಿಂದೆ ಕೆಲಸ ಮಾಡುತ್ತಿದ್ದ ವೇಳೆ ಕತ್ತು ಸೀಳಿ ಹಂತಕ ಎಸ್ಕೇಪ್ ಆಗಿದ್ದಾನೆ.
ಬದುಕುವ ಧಾವಂತದಲ್ಲಿ ಸಂಧ್ಯಾ ಅವರು ಮನೆಯೊಳಗೆ ಓಡಿ ಬಂದಿರುವುದರಿಂದ ಮನೆ ತುಂಬಾ ರಕ್ತ ಚೆಲ್ಲಾಡಿದೆ. ಗೋಡೆ ಹಿಡಿದು ಏಳಲು ಯತ್ನಿಸಿರುವುದು ಗೋಡೆ ಮೇಲೆ ಆಕೆಯ ರಕ್ತಮಿಶ್ರಿತ ಹಸ್ತದ ಗುರುತು ಸಾಕ್ಷಿಯಾಗಿದೆ.
ಗಂಡನ ಬಿಟ್ಟು ಸಂಧ್ಯಾ ಅವರು ತವರು ಮನೆ ಸೇರಿದ್ದರು.
ಕಳೆದ ನಾಲ್ಕು ದಿನದಿಂದ ಅವರು ನಾಪತ್ತೆಯಾಗಿದ್ದರು.
ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ನಿನ್ನೆ ಸಂಜೆ ಅರೆನೂರು ಗ್ರಾಮದ ಮನೆಗೆ ಅವರು ವಾಪಸ್ ಬಂದಿದ್ದರು.ಆದರೆ ಇಂದು ಬರ್ಬರವಾಗಿಹತ್ಯೆಗೀಡಾಗಿದ್ದಾರೆ.ವಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು