12:58 AM Thursday9 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆ: ಅಬ್ಬರಿಸಿ ಬೊಬ್ಬಿರಿಸಿದ ದಶ ಮಂಟಪಗಳು

02/12/2025, 22:41

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣ್ಣದ ಕಳೆದ 40 ವರ್ಷಗಳಿಂದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ದೇವಸ್ಥಾನ ಸೇವಾ ಟ್ರಸ್ಟ್ ಆಚರಿಸಿಕೊಂಡು ಬರುತ್ತಿರುವ ಹನುಮ ಜಯಂತಿ ಅದ್ದೂರಿಯಾಗಿ ನಡೆಯಿತು. ಕಳೆದ ಎರಡು ದಿನಗಳಿಂದ ಹನುಮ ಜಯಂತಿ ಕಳೆಗಟ್ಟಿದ್ದ ಪಟ್ಟಣದ ರಥ ಬೀದಿ ಅದ್ದೂರಿ ಮಂಟಪಗಳ ಮೆರವಣಿಗೆಗೆ ಸಾಕ್ಷಿಯಾಯಿತು. ಆಂಜನೇಯನ ಸಾಹಸ, ಶಕ್ತಿ ಹೊಂದಿರುವ ವಿವಿಧ ಕಥಾಹಂದರದ ಹೊತ್ತು ಸಾಗಿದ ಮಂಟಪಗಳಲ್ಲಿ ಡಿಜೆ, ಆಕರ್ಷಕ ವಿದ್ಯುತ್ ಅಲಂಕಾರಕ್ಕೆ ಸಾರ್ವಜನಿಕರು ಫಿದಾ ಆದರು, ಯುವ ಸಮೂಹ ಕುಣಿದು ಕುಪ್ಪಲಿಸಿ ಸಂಭ್ರಮಿಸಿದರು.


ಕೂಡಿಗೆ, ಮುಳ್ಳುಸೋಗೆ, ಕೊಪ್ಪ, ಮಾದಪಟ್ಟಣ, ಗುಡ್ಡೆಹೊಸೂರು ಭಾಗದಿಂದ ಮಂಟಪಗಳು ಸಂಜೆ 7 ಗಂಟೆ ಸುಮಾರಿಗೆ ಪಟ್ಟಣ ಪ್ರವೇಶಿಸಿದವು. ಇಲ್ಲಿನ ಗಣಪತಿ ದೇವಾಲಯ ಆವರಣದಲ್ಲಿ ಪ್ರದರ್ಶನ ನೀಡಿದ್ದು, ಸಾರ್ವಜನಿಕರು ಮೂಕ ವಿಸ್ಮಿತರಾದರು. ಪ್ರತಿ ವರ್ಷದಂತೆ ಈ ಭಾರಿಯೂ ಪಕ್ಕದ ಜಿಲ್ಲೆ ಮೈಸೂರಿನ ಪಿರಿಯಾಪಟ್ಟಣ ತಾಲ್ಲೂಕು, ಹಾಸನ ಭಗದಿಂದಲೂ ಅದ್ದೂರಿ ಉತ್ಸವಕ್ಕೆ ಸಾಕ್ಷಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು