2:17 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರಕ್ತದಾನ ಮಾಡುವ ಮುಖಾಂತರ ಸಮಾಜಕ್ಕೆ ಪುಣ್ಯ ಕಾರ್ಯ ಮಾಡಿ: ವೈದ್ಯಾಧಿಕಾರಿ ವೆಂಕಟೇಶ್ 

02/09/2021, 19:43

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ
info.reporterkarnataka@gmail.com

ಇಂದಿನ ಸಮಾಜದಲ್ಲಿ ರಕ್ತದಾನ ಮಾಡುವ ಮುಖಾಂತರ ಸಮಾಜದ ಪುಣ್ಯ ಕಾರ್ಯ ಮಾಡಿದಂತೆ ಎಂದು ವೈದ್ಯಾಧಿಕಾರಿ ವೆಂಕಟೇಶ್ ಹೇಳಿದರು .

ಅವರಿಂದು ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಗಮಂಗಲದಲ್ಲಿ ರೋಟರಿ ಕ್ಲಬ್ ಆಯೋಜನೆ ಮಾಡಿದ ರಕ್ತದಾನ ಶಿಬಿರದ ಸಮಾರಂಭದಲ್ಲಿ ಮಾತನಾಡಿ, ರಕ್ತದಾನ ಮಾಡುವ ಮುಖಾಂತರ ಬೇರೊಬ್ಬರ ಪ್ರಾಣ ಉಳಿಸಲು ಅಥವಾ ತುರ್ತು ರಕ್ತ ಇತರೆ ಕಾಯಿಲೆಗಳಿಗೂ ಬೇಕಾಗಿರುವುದರಿಂದ ಯುವಕರು ಹೆಚ್ಚೆಚ್ಚು ರಕ್ತದಾನ ಮಾಡುವಂತೆ ತಿಳಿಸಿದರು.

 ರಕ್ತದಾನ ಮಾಡುವುದರಿಂದ ಯಾವುದೇ ಅನುಮಾನ ಅಥವಾ ಇತರೆ ಕಾಯಿಲೆಗಳು ಬರುತ್ತದೆ  ಎಂಬುದನ್ನು ದೂರ ಮಾಡುವ ಮುಖಾಂತರ  ರಕ್ತದಾನ ಮಾಡುವುದರಿಂದ ರಕ್ತವು ಅಷ್ಟೇ ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತದೆ ಬೇರೆ ಯಾವುದೇ ಮಾತುಗಳಿಗೆ ಕಿವಿಗೊಡದೆ ಇನ್ನೊಬ್ಬರ ಜೀವ ಉಳಿಸುವ ಅವಶ್ಯಕತೆಗೆ ಬೇಕಾಗಿರುವುದರಿಂದ ಇಂತಹ ಶಿಬಿರಗಳು ಅವಶ್ಯಕವೆಂದು ಮಾತನಾಡಿದರು.

ಇದೇ ವೇಳೆ ತಾಲ್ಲೂಕು ರೋಟರಿ ಅಧ್ಯಕ್ಷ

ಮಹೇಶ್ , ಕಾರ್ಯದರ್ಶಿ ಸೋಮೇಶಪ್ಪ, 

 ಡಾ. ಶಿವಕುಮಾರ್, ಮಂಡ್ಯ ಜಿಲ್ಲೆಯ ರಕ್ತನಿಧಿ ಕೇಂದ್ರದ ಡಾ. ಶಾರ್ವರಿ, ಡಾ.ವಿನೋದ್ ನಾಗರಾಜು ಹಾಗೂ ರೋಟರಿ ಪದಾಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು