12:46 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ತುಮಕೂರು ವಿಶ್ವವಿದ್ಯಾಲಯಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಲು ಮನವಿ

03/12/2025, 12:56

ಬೆಂಗಳೂರು(reporterkarnataka.com): ಪ್ರತಿಷ್ಠಿತ ತುಮಕೂರು ವಿಶ್ವವಿದ್ಯಾಲಯಕ್ಕೆ ಸಿದ್ಧಗಂಗೆಯ ಡಾ.ಶಿವಕುಮಾರ ಮಹಾಸ್ವಾಮಿಗಳ ಹೆಸರಿಡಲು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಮನವಿ ಮಾಡಿದ್ದಾರೆ.
ಈ ಕುರಿತು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರಿಗೆ ಲಿಖಿತ ಮನವಿ ಪತ್ರವನ್ನು ಕುಲಪತಿಗಳ ಮೂಲಕ‌ ಸಲ್ಲಿಸಿರುವ ಅವರು,ಕರ್ನಾಟಕ ರಾಜ್ಯದ ವಿಶ್ವವಿದ್ಯಾನಿಲಯಗಳಿಗೆ ಮಹಾತ್ಮರುಗಳ ಹೆಸರಿಡುವ ಪದ್ಧತಿ ರೂಡಿಯಲ್ಲಿದ್ದು, ಅದರಂತೆ ಸರ್ಕಾರವು ಆಗಾಗ ಸುತ್ತೋಲೆ, ಅಧಿಸೂಚನೆಗಳನ್ನು ಹೊರಡಿಸುತ್ತ ಬಂದಿರುತ್ತದೆ. ಇತ್ತೀಚೆಗೆ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡುವ ಸಂದರ್ಭದಲ್ಲಿ ಸದನದಲ್ಲಿ ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸುರೇಶಗೌಡ ರವರು ಡಾ.ಶಿವಕುಮಾರಸ್ವಾಮಿಗಳ ಹೆಸರನ್ನು ಇಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.

ತುಮಕೂರು ಜಿಲ್ಲೆಯು ಪ್ರಮುಖ ಶೈಕ್ಷಣಿಕ ಹಾಗೂ ಧಾರ್ಮಿಕ ಕೇಂದ್ರವಾಗಿದಕ್ಕೆ ಕಾರಣವಾದ ಸಂಸ್ಥೆಗಳ ಸಿಂಹಪಾಲು ಡಾ. ಶಿವಕುಮಾರ ಸ್ವಾಮಿಗಳ ನೇತೃತ್ವ ಹಾಗೂ ಸಿದ್ದಗಂಗಾ ಮಠದ್ದಾಗಿದೆ. ತ್ರಿವಿಧ ದಾಸೋಹಿ ಸಮೈಕ್ಯ ಭಾವವನ್ನು ಹೊಂದಿ ಜಾತಿ, ಕುಲ,ಧರ್ಮ ಎಲ್ಲವನ್ನೂ ಮೀರಿ ಶಿಕ್ಷಣ ರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಶತಾಯುಷಿಗಳಾಗಿದ್ದ ಡಾ. ಶಿವಕುಮಾರಸ್ವಾಮಿಗಳ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ಇಡುವುದು ಅತ್ಯಂತ ಸೂಕ್ತ ಎಂದು ಅವರು ತಮ್ಮ ಮನವಿಯಲ್ಲಿ ವಿವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು