1:47 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಸಿಎಂ ಬೊಮ್ಮಾಯಿಯ ‘ಬೊಂಬಾಯಿ’ ಅಂದ್ರು ಕೇಂದ್ರ ಗೃಹ ಸಚಿವರು!; ರಾಜ್ಯ ಗೃಹ ಸಚಿವ ಅರಗರ ‘ಅಗರ’ ಅಂದ್ರು ಸಚಿವ ಭೈರತಿ !!

02/09/2021, 21:45

ದಾವಣಗೆರೆ(reporterkarnataka.com): ಒಬ್ರು ಬೊಂಬಾಯಿ ಅಂದ್ರು. ಇನ್ನೊಬ್ಬರು ಅಗರ ಅಂದ್ರು. ಜನ ಮಾತ್ರ ಮುಸಿ ಮುಸಿ ನಕ್ಕು ಸಮ್ಮನಾದರು.

ಇದು ಇವತ್ತು ಬೆಣ್ಣೆನಗರಿ ದಾವಣಗೆರೆಯ ಜಿಎಂಐಟಿಯಲ್ಲಿ ನಡೆದ ಸ್ವಾರಸ್ಯ ಘಟನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ರು. ಗೃಹ ಸಚಿವರು ಹಲವು ಉದ್ಘಾಟನೆಗಳನ್ನು ನೆರವೇರಿಸಿದರು. ನಂತರ ಮಾತಾಡಿದ ಅಮಿತ್ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಹೇಳುವಾಗ ತಪ್ಪಿ ‘ಬೊಂಬಾಯಿ’ ಅಂತ ಹೇಳಿ ಬಿಟ್ರು. ಇದು ನೆರೆದ ಜನರಲ್ಲಿ ನಗು ತರಿಸಿತು. ಹೆಚ್ಚಿನವರು ನಗುವನ್ನು ಅದುಮಿಟ್ಟುಕೊಂಡು ಮುಸಿ ಮುಸಿ ನಕ್ಕರು. 

ಹಾಗೆ ಸ್ವಾಗತ ಭಾಷಣ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಹೆಸರು ಹೇಳಲು ತಡವರಿಸಿದರು. ” ಅಗರ… ಅಗರ.. ಎಂದು ಹೇಳಿ ಭೈರತಿ  ತಡವರಿಸಿದರು‌. ಇದು ಕೂಡ ಜನರಿಗೆ ಪುಕ್ಕಟೆ ಮನರಂಜನೆ ನೀಡಿತು.

ಅಮಿತ್ ಶಾ ಅವರು ಗುಜರಾತಿನವರು ಅವರಿಗೆ ಇಲ್ಲಿನ ಹೆಸರು ಉಚ್ಚರಣೆ ಮಾಡುವುದು ಕಷ್ಟವಾದೀತು. ಆದರೆ ಇಲ್ಲಿಯವರೇ ಆದ ಭೈರತಿಗೇನು ಕಷ್ಟ ಎಂದು ಜನ ಮಾತನಾಡಿಕೊಳ್ಳುತ್ತಿದ್ದರು. ದಶಕಗಳ ಕಾಲ ಬಿಜೆಪಿಯಲ್ಲಿ ಶಾಸಕರಾಗಿದ್ದ ಅರಗ ಜ್ಞಾನೇಂದ್ರ ಅವರಿಗೆ ಕೊನೆಗೂ ಸಚಿವ ಸ್ಥಾನ ದೊರಕಿ ಆಯಕಟ್ಟಿನ ಖಾತೆ ದೊರಕಿದೆ. ಆದರೆ ಅವರದೇ ಪಕ್ಷದ ಸಚಿವರಿಗೆ ಮಾತ್ರ ಅವರ ಹೆಸರು ಗೊತ್ತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು