3:30 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸಿಎಂ ಬೊಮ್ಮಾಯಿಯ ‘ಬೊಂಬಾಯಿ’ ಅಂದ್ರು ಕೇಂದ್ರ ಗೃಹ ಸಚಿವರು!; ರಾಜ್ಯ ಗೃಹ ಸಚಿವ ಅರಗರ ‘ಅಗರ’ ಅಂದ್ರು ಸಚಿವ ಭೈರತಿ !!

02/09/2021, 21:45

ದಾವಣಗೆರೆ(reporterkarnataka.com): ಒಬ್ರು ಬೊಂಬಾಯಿ ಅಂದ್ರು. ಇನ್ನೊಬ್ಬರು ಅಗರ ಅಂದ್ರು. ಜನ ಮಾತ್ರ ಮುಸಿ ಮುಸಿ ನಕ್ಕು ಸಮ್ಮನಾದರು.

ಇದು ಇವತ್ತು ಬೆಣ್ಣೆನಗರಿ ದಾವಣಗೆರೆಯ ಜಿಎಂಐಟಿಯಲ್ಲಿ ನಡೆದ ಸ್ವಾರಸ್ಯ ಘಟನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ರು. ಗೃಹ ಸಚಿವರು ಹಲವು ಉದ್ಘಾಟನೆಗಳನ್ನು ನೆರವೇರಿಸಿದರು. ನಂತರ ಮಾತಾಡಿದ ಅಮಿತ್ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಹೇಳುವಾಗ ತಪ್ಪಿ ‘ಬೊಂಬಾಯಿ’ ಅಂತ ಹೇಳಿ ಬಿಟ್ರು. ಇದು ನೆರೆದ ಜನರಲ್ಲಿ ನಗು ತರಿಸಿತು. ಹೆಚ್ಚಿನವರು ನಗುವನ್ನು ಅದುಮಿಟ್ಟುಕೊಂಡು ಮುಸಿ ಮುಸಿ ನಕ್ಕರು. 

ಹಾಗೆ ಸ್ವಾಗತ ಭಾಷಣ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಹೆಸರು ಹೇಳಲು ತಡವರಿಸಿದರು. ” ಅಗರ… ಅಗರ.. ಎಂದು ಹೇಳಿ ಭೈರತಿ  ತಡವರಿಸಿದರು‌. ಇದು ಕೂಡ ಜನರಿಗೆ ಪುಕ್ಕಟೆ ಮನರಂಜನೆ ನೀಡಿತು.

ಅಮಿತ್ ಶಾ ಅವರು ಗುಜರಾತಿನವರು ಅವರಿಗೆ ಇಲ್ಲಿನ ಹೆಸರು ಉಚ್ಚರಣೆ ಮಾಡುವುದು ಕಷ್ಟವಾದೀತು. ಆದರೆ ಇಲ್ಲಿಯವರೇ ಆದ ಭೈರತಿಗೇನು ಕಷ್ಟ ಎಂದು ಜನ ಮಾತನಾಡಿಕೊಳ್ಳುತ್ತಿದ್ದರು. ದಶಕಗಳ ಕಾಲ ಬಿಜೆಪಿಯಲ್ಲಿ ಶಾಸಕರಾಗಿದ್ದ ಅರಗ ಜ್ಞಾನೇಂದ್ರ ಅವರಿಗೆ ಕೊನೆಗೂ ಸಚಿವ ಸ್ಥಾನ ದೊರಕಿ ಆಯಕಟ್ಟಿನ ಖಾತೆ ದೊರಕಿದೆ. ಆದರೆ ಅವರದೇ ಪಕ್ಷದ ಸಚಿವರಿಗೆ ಮಾತ್ರ ಅವರ ಹೆಸರು ಗೊತ್ತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು