2:45 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಸಿಎಂ ಬೊಮ್ಮಾಯಿಯ ‘ಬೊಂಬಾಯಿ’ ಅಂದ್ರು ಕೇಂದ್ರ ಗೃಹ ಸಚಿವರು!; ರಾಜ್ಯ ಗೃಹ ಸಚಿವ ಅರಗರ ‘ಅಗರ’ ಅಂದ್ರು ಸಚಿವ ಭೈರತಿ !!

02/09/2021, 21:45

ದಾವಣಗೆರೆ(reporterkarnataka.com): ಒಬ್ರು ಬೊಂಬಾಯಿ ಅಂದ್ರು. ಇನ್ನೊಬ್ಬರು ಅಗರ ಅಂದ್ರು. ಜನ ಮಾತ್ರ ಮುಸಿ ಮುಸಿ ನಕ್ಕು ಸಮ್ಮನಾದರು.

ಇದು ಇವತ್ತು ಬೆಣ್ಣೆನಗರಿ ದಾವಣಗೆರೆಯ ಜಿಎಂಐಟಿಯಲ್ಲಿ ನಡೆದ ಸ್ವಾರಸ್ಯ ಘಟನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ರು. ಗೃಹ ಸಚಿವರು ಹಲವು ಉದ್ಘಾಟನೆಗಳನ್ನು ನೆರವೇರಿಸಿದರು. ನಂತರ ಮಾತಾಡಿದ ಅಮಿತ್ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಹೇಳುವಾಗ ತಪ್ಪಿ ‘ಬೊಂಬಾಯಿ’ ಅಂತ ಹೇಳಿ ಬಿಟ್ರು. ಇದು ನೆರೆದ ಜನರಲ್ಲಿ ನಗು ತರಿಸಿತು. ಹೆಚ್ಚಿನವರು ನಗುವನ್ನು ಅದುಮಿಟ್ಟುಕೊಂಡು ಮುಸಿ ಮುಸಿ ನಕ್ಕರು. 

ಹಾಗೆ ಸ್ವಾಗತ ಭಾಷಣ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಹೆಸರು ಹೇಳಲು ತಡವರಿಸಿದರು. ” ಅಗರ… ಅಗರ.. ಎಂದು ಹೇಳಿ ಭೈರತಿ  ತಡವರಿಸಿದರು‌. ಇದು ಕೂಡ ಜನರಿಗೆ ಪುಕ್ಕಟೆ ಮನರಂಜನೆ ನೀಡಿತು.

ಅಮಿತ್ ಶಾ ಅವರು ಗುಜರಾತಿನವರು ಅವರಿಗೆ ಇಲ್ಲಿನ ಹೆಸರು ಉಚ್ಚರಣೆ ಮಾಡುವುದು ಕಷ್ಟವಾದೀತು. ಆದರೆ ಇಲ್ಲಿಯವರೇ ಆದ ಭೈರತಿಗೇನು ಕಷ್ಟ ಎಂದು ಜನ ಮಾತನಾಡಿಕೊಳ್ಳುತ್ತಿದ್ದರು. ದಶಕಗಳ ಕಾಲ ಬಿಜೆಪಿಯಲ್ಲಿ ಶಾಸಕರಾಗಿದ್ದ ಅರಗ ಜ್ಞಾನೇಂದ್ರ ಅವರಿಗೆ ಕೊನೆಗೂ ಸಚಿವ ಸ್ಥಾನ ದೊರಕಿ ಆಯಕಟ್ಟಿನ ಖಾತೆ ದೊರಕಿದೆ. ಆದರೆ ಅವರದೇ ಪಕ್ಷದ ಸಚಿವರಿಗೆ ಮಾತ್ರ ಅವರ ಹೆಸರು ಗೊತ್ತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು