8:17 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

Chikkamagaluru | ದತ್ತ ಜಯಂತಿ: ಕೊಟ್ಟಿಗೆಹಾರ, ಬಣಕಲ್ ಸಂಪೂರ್ಣ ಸ್ತಬ್ದ; ಅಂಗಡಿ ಮುಂಗಟ್ಟು ಬಂದ್

04/12/2025, 20:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದತ್ತ ಜಯಂತಿ ಪ್ರಯುಕ್ತ ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ವಾಹನಗಳ ಸಂಚಾರ ಎಂದಿನಂತೆಯೇ ಇತ್ತು.

ಚಿಕ್ಕಮಗಳೂರು ದತ್ತ ಜಯಂತಿಗೆ 344ಕ್ಕೂ ಹೆಚ್ಚು ದತ್ತಮಾಲಾಧಾರಿಗಳ ವಾಹನಗಳು ಕರಾವಳಿ ಭಾಗದಿಂದ ಚಾರ್ಮಾಡಿ ಮಾರ್ಗವಾಗಿ ಸಂಚರಿಸಿದವು. ದತ್ತ ಪೀಠಕ್ಕೆ ಹೋಗುವ ವಾಹನಗಳಿಗೆ ಸೀರಿಯಲ್ ನಂಬರ್ ಹಾಕಿದ ಪತ್ರಗಳನ್ನು ಪೊಲೀಸರು ಅಂಟಿಸಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಎಲ್ಲೆಡೆಯು ಅಂಗಡಿ ಮುಂಗಟ್ಟು ಮುಚ್ಚಿದ್ದರಿಂದ ಶಾಂತಿಯುತವಾಗಿ ದತ್ತ ಜಯಂತಿ ಆಚರಿಸಲಾಯಿತು. ಪೊಲೀಸರು ದತ್ತ ಜಯಂತಿ ಮಾಲಾಧಾರಿಗಳು ಸಾಗುವ ಗಡಿ ಭಾಗದಲ್ಲಿ ಸೂಕ್ತ ಭದ್ರತೆ ಒದಗಿಸಿದ್ದರು. ಬಣಕಲ್, ಬಾಳೂರು ಹೊರ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳು ತಪಾಸಣೆಯ ಹೊಣೆ ಹೊತ್ತಿದ್ದರು.ಆಟೋ ರಿಕ್ಷಾ ಚಾಲಕರು ಬಾಡಿಗೆ ಇಲ್ಲದೇ ಪರದಾಡಿದರು. ಬಸ್ ಗಳಲ್ಲೂ ಜನ ಸಂಖ್ಯೆ ವಿರಳವಾಗಿತ್ತು. ಇಡೀ ಬಣಕಲ್ ಸುತ್ತಮುತ್ತ ವ್ಯಾಪಾರ ವ್ಯವಹಾರ ಸ್ಥಗಿತವಾಗಿತ್ತು. ಬಣಕಲ್ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಗಸ್ತು ತಿರುಗುತ್ತಿರುವ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು