9:12 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬೋಳೂರು: ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನಕ್ಕೆ ನೂತನ ಮೇಲ್ಫಾವಣಿ, ನೆಲಹಾಸು ಕಾಮಗಾರಿಗೆ ಭೂಮಿಪೂಜೆ

04/12/2025, 22:06

ಮಂಗಳೂರು(reporterkarnataka.com): ಪಾಲಿಕೆ ವ್ಯಾಪ್ತಿಯ 27ನೇ ಬೋಳೂರು ವಾರ್ಡಿನ ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನಕ್ಕೆ ನೂತನವಾಗಿ ನಿರ್ಮಾಣಗೊಳ್ಳಲಿರುವ ಮೇಲ್ಫಾವಣಿ ಹಾಗೂ ನೆಲಹಾಸು ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.

ನಂತರ ಮಾತನಾಡಿದ ಶಾಸಕರು, ಇಲ್ಲಿನ ದೈವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ಕೆಲವು ಅಭಿವೃದ್ಧಿ ಕಾರ್ಯಗಳು ಅಗತ್ಯವಾಗಿ ನಡೆಯಬೇಕಾಗಿದ್ದು ಆ ಬಗ್ಗೆ ಸ್ಥಳೀಯ ಬಿಜೆಪಿ ಪ್ರಮುಖರು, ದೇವಸ್ಥಾನಕ್ಕೆ ಸಂಬಂಧಪಟ್ಟವರು ಮಾಡಿದ ಮನವಿಯಂತೆ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಪಾಲಿಕೆ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು, ವಾರ್ಡ್ ಅಧ್ಯಕ್ಷರಾದ ದಿನೇಶ್, ಸ್ಥಳೀಯ ಪ್ರಮುಖರಾದ ಮೋಹನ್ ಬರ್ಕೆ, ರಘು ಶೆಟ್ಟಿ, ರವೀಂದ್ರ ಆಚಾರಿ, ರವೀಂದ್ರ ಶೆಣೈ, ವಿಜೇಂದ್ರ ಸಾಲ್ಯಾನ್, ತಿಲಕ್ ರಾಜ್ ಕೋಟ್ಯಾನ್, ಭಾಸ್ಕರ ಚಂದ್ರ ಶೆಟ್ಟಿ, ಸದಾಶಿವ ಪೂಜಾರಿ, ದಾಮೋದರ ಶೆಟ್ಟಿ, ಸಂದೀಪ್ ಪೂಜಾರಿ, ಗೌತಮ್ ಸುವರ್ಣ, ವಿಶಾಲ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು