1:57 PM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ವೈಟ್‌ಫೀಲ್ಡ್‌ನ ಬೆಸ್ಕಾಂ ಉಪ ವಿಭಾಗ ಕಚೇರಿ ಉದ್ಘಾಟನೆ: ಇಂಧನ ಸಚಿವ ಕೆ.ಜೆ. ಜಾರ್ಜ್ ಚಾಲನೆ

05/12/2025, 20:46

ಬೆಂಗಳೂರು(reporterkarnataka.com): ಬೆಸ್ಕಾಂನ ವೈಟ್‌ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಉದ್ಘಾಟಿಸಿದರು.


ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಇದುವರೆಗೆ ವೈಟ್‌ಫೀಲ್ಡ್ ವಿಭಾಗ ಹಾಗೂ ಇ-4 ಉಪವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಇಮ್ಮಡಿಹಳ್ಲಿ ಮುಖ್ಯರಸ್ತೆಯ ಗಾಂಧೀಪುರದಲ್ಲಿ ನಿರ್ಮಾಣಗೊಂಡಿರುವ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದ್ದು ಗ್ರಾಹಕರಿಗೆ ಅನುಕೂಲಕರವಾಗಲಿದೆ,” ಎಂದರು.
ಈ ಜಾಗ ಪಡೆಯಲು ನೆರವಾದ ಶಾಸಕಿ ಮಂಜುಳಾ ಅರವಿಂದ್ ಲಿಂಬಾವಳಿ ಅವರಿಗೆ ಧನ್ಯವಾದ ಹೇಳಿದ ಸಚಿವರು, “ನಗರದ ಪ್ರಮುಖ ಪ್ರದೇಶವಾಗಿರುವ ವೈಟ್‌ಫೀಲ್ಡ್‌ನಲ್ಲಿ ವಿಭಾಗದಲ್ಲಿ 3,88,917 ಕ್ಕೂ ಹೆಚ್ಚಿನ ಗ್ರಾಹಕರಿದ್ದಾರೆ. ಸಾರ್ವಜನಿಕರಿಗೆ ನೂತನ ಕಚೇರಿ ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹದೇವಪುರ ಕ್ಷೇತ್ರ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ವ್ಯವಸ್ಥಾಪಕ‌ ನಿರ್ದೇಶಕ ಡಾ.ಎನ್.ಶಿವಶಂಕರ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

*ಹೊಸ ಕಟ್ಟಡದ ವಿಶೇಷತೆ:*
13,687 ಚದರ ಅಡಿಯ ನೆಲ ಅಂತಸ್ತು ಸೇರಿದಂತೆ ಮೂರು ಅಂತಸ್ತುಗಳ ಬೆಸ್ಕಾಂನ ವೈಟ್‌ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಉಪ ವಿಭಾಗ ಕಚೇರಿ ಕಟ್ಟಡವನ್ನು ಅಂದಾಜು 4.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು