3:37 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಎರಡು ಗುಂಪುಗಳ ನಡುವೆ ಮಾರಾಮಾರಿ: ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹತ್ಯೆ

06/12/2025, 08:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ
ಕಾಂಗ್ರೆಸ್ ಗ್ರಾಪಂ ಸದಸ್ಯನ ಬರ್ಬರ ಹತ್ಯೆ ಮಾಡಲಾಗಿದೆ.
ಗಣೇಶ್ (38) ಮೃತ ದುರ್ದೈವಿಯಾಗಿದ್ದಾರೆ.
ಮಚ್ಚಿನಿಂದ ಯುವಕರ ಗುಂಪೊಂದು ಈ ಕೃತ್ಯ ಎಸಗಿದೆ. ಎರಡು ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಾಂಗ್ರೆಸ್ ಗ್ರಾಪಂ ಸದಸ್ಯ ಸಾವು ಕಂಡಿದ್ದಾರೆ.ಗಣೇಶ್ ಅವರುಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.ಸಖರಾಯಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ರಾತ್ರಿ 10.30ರ ವೇಳೆಗೆ ಸಖರಾಯಪಟ್ಟಣದಲ್ಲಿ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಕೊಲೆಗೂ ಮುನ್ನ ಸಖರಾಯಪಟ್ಟಣ ಬಾರ್ ಬಳಿ ಗಲಾಟೆಯಾಗಿತ್ತು. ಬಾರ್ ಬಳಿ ಗಲಾಟೆಯಾದ ಅರ್ಧ ಗಂಟೆ ಬಳಿಕ ಮಠದ ಬಳಿ ಗಲಾಟೆಯಾಗಿ ಕೊಲೆ ನಡೆದಿದೆ.


ಎದುರಾಳಿ ಗುಂಪಿನ ಇಬ್ಬರ ತಲೆಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು