8:51 PM Saturday6 - December 2025
ಬ್ರೇಕಿಂಗ್ ನ್ಯೂಸ್
Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ

ಇತ್ತೀಚಿನ ಸುದ್ದಿ

ಡ್ರಗ್ಸ್ ಮಾರಾಟ: 4 ಮಂದಿ ಆರೋಪಿಗಳ ಬಂಧನ; 50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ

06/12/2025, 19:52

ಮಂಗಳೂರು(reporterkarnataka.com): ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು 50 ಲಕ್ಷ ರೂ. ಮೌಲ್ಯದ ಸುಮಾರು 517.76 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನೇತೃತ್ವದಲ್ಲಿ ಸಿಸಿಬಿಯ ತಂಡವು ಖಚಿತ ಮಾಹಿತಿ ಸಂಗ್ರಹಿಸಿ ಡಿ.6ರಂದು ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರಾಮ್ ಶೆಟ್ಟಿ ಕನ್ವಿನ್ಷನ್ ಹಾಲ್ ಬಳಿ ಒಂದು ಕಾರಿನಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವೇಳೆ ದಾಳಿ ನಡೆಸಿ ನಾವುಂದ ನಿವಾಸಿ ಮೊಹಮ್ಮದ್ ಶಿಯಾಬ್ ಅಲಿಯಾಸ್ ಶಿಯಾಬ್ ,ನರಿಂಗಾನ ನಿವಾಸಿ ಮೊಹಮ್ಮದ್ ನೌಷದ್ ಅಲಿಯಾಸ್ ನೌಷದ್,ಕಸಬಾ ಬೆಂಗ್ರೆ ನಿವಾಸಿ ಇಮ್ರಾನ್ ಅಲಿಯಾಸ್ ಇಂಬ, ಮಂಗಳೂರು ಹಾಗೂ ಬ್ರಹ್ಮರ ಕೊಟ್ಲು ನಿವಾಸಿ ನಿಸಾರ್ ಅಹಮ್ಮದ್ ಅಲಿಯಾಸ್ ನಿಸಾರ್ ಎಂಬವರನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ ಸುಮಾರು 50 ಲಕ್ಷ ರೂ. ಮೌಲ್ಯದ ಸುಮಾರು 517.76 ಗ್ರಾಂ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ 10 ಲಕ್ಷ ಮೌಲ್ಯದ ನೀಲಿ ಬಣ್ಣದ ಮಾರುತಿ ಕಂಪನಿಯ FRONX ಮಾದರಿಯ ಕೆಎ-70-ಎಮ್ -7115 ಕಾರು, ಹಾಗೂ 5 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತುವನ್ನು ಆರೋಪಿತರು ಬೆಂಗಳೂರಿನಲ್ಲಿ ಒಬ್ಬ ನೈಜೀರಿಯಾ ದೇಶದ ವ್ಯಕ್ತಿಯಿಂದ ತಂದು ಮಂಗಳೂರು ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶದಿಂದ ತಂದಿರುವುದಾಗಿ ತಿಳಿದು ಬಂದಿರುತ್ತದೆ. ಆರೋಪಿತರ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು