6:17 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಮುಖ್ಯ ನ್ಯಾಯಮೂರ್ತಿ ಭೇಟಿ; ಪೂರಕವಾಗಿ ಸ್ಪಂದನೆ

06/12/2025, 22:29

ಮಂಗಳೂರು(reporterkarnataka.com): ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ಮಂಗಳೂರಿನಲ್ಲಿ ಸಂಚಾರ ಹೈಕೋರ್ಟ್ ಪೀಠ ಸ್ಥಾಪನೆ ಉದ್ದೇಶಕ್ಕಾಗಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ನಿಯೋಗ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಮೂರ್ತಿಗಳಾದ ಗೌರವಾನ್ವಿತ ವಿಭು ಬಖ್ರು ರವರನ್ನು ಉಡುಪಿ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿಯಾಗಿ ಯಾಗಿ ಮನವಿ ಸಲ್ಲಿಸಲಾಯಿತು.


ಹೋರಾಟ ಸಮಿತಿಯ ಸಂಚಾಲಕರು ವಿಧಾನ ಪರಿಷತ್ ನ ಸದಸ್ಯ ಐವನ್ ಡಿಸೋಜ ಅವರು ಮನವಿಯನ್ನು ಸಲ್ಲಿಸಿ ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಬಹಳ ಮುಖ್ಯವಾಗಿದ್ದು, ಇದರಿಂದ ಸಾಮಾನ್ಯ ಜನರು ದೂರದ ಬೆಂಗಳೂರಿಗೆ ಹೋಗಿ ಕಾನೂನು ಹೋರಾಟದಲ್ಲಿ ತೊಡಗಿಸಿಕೊಳ್ಳಲು ಬಹಳ ಕಷ್ಟವಾಗುತ್ತದೆ. ಮಳೆಗಾಲದ ಸಂದರ್ಭದಲ್ಲಿ ದೂರದ ಬೆಂಗಳೂರಿನ ಸಂಪರ್ಕ ಆಗಾಗ ಕಡಿತಗೊಳ್ಳುವುದರಿಂದ ಜನರು ಹೈಕೋರ್ಟಿಗೆ ಸಂಚರಿಸಲು ಕಷ್ಟವನ್ನು ಅನುಭವಿಸಬೇಕಾಗಿದ್ದು ಅಲ್ಲದೆ ಕರಾವಳಿ ಭಾಗ ಉಡುಪಿ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ದಾವೆಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದ್ದು ಇದರಿಂದ ಈ ಭಾಗದ ಜನರಿಗೆ ಬಹಳ ತೊಂದರೆಯಾಗುತ್ತಿರುವುದರಿಂದ, ಅಲ್ಲದೆ ರಾಜ್ಯದ ಮುಖ್ಯಮಂತ್ರಿಗಳು ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಲವನ್ನು ತೋರಿಸಿರುವುದರಿಂದ, ಮೊದಲಿಗೆ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸಲು ಒಪ್ಪಿಗೆ ನೀಡಬೇಕೆಂದು ವಿನಂತಿಸಿದರು.
ಈ ಮನವಿಗೆ ಪೂರಕವಾಗಿ ಸ್ಪಂದಿಸಿದ ಮುಖ್ಯ ನ್ಯಾಯಮೂರ್ತಿಗಳು ತಮ್ಮ ಮನವಿಯ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಮಿತಿಯ ನಿಯೋಗದಲ್ಲಿ ಮಂಗಳೂರು ವಕೀಲ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್‍. ವಿ., ಮಂಗಳೂರಿನ ಪ್ರಧಾನ ಜಿಲ್ಲಾ ಸರಕಾರಿ ವಕೀಲರಾದ ಎಂ. ಪಿ. ನರೋನ್ಹ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್., ಉಡುಪಿ ವಕೀಲರ ಸಂಘದ ಅಧ್ಯಕ್ಷರ ರೊನಾಲ್ಡ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು