6:31 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭೇಟಿ: ‘ಅಭಿನವ ಕೃಷ್ಣದೇವರಾಯ’ ಬಿರುದು ಪ್ರದಾನ

07/12/2025, 20:30

ಉಡುಪಿ(reporterkarnataka.com): ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ ಪಾಲ್ಗೊಂಡಿದ್ದು, ಅವರಿಗೆ ಅಭಿನವ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೃಷ್ಣದೇವರಾಯ ಆದರ್ಶ ರಾಜ್ಯ ನಿರ್ಮಾಣ ಮಾಡಿದ್ದರು. ಸನಾತನ ಧರ್ಮ ರಕ್ಷಣೆಗೆ ಪವನ್ ಕಲ್ಯಾಣ್ ಶ್ರಮ ಶ್ಲಾಘನೀಯ. ಹಾಗಾಗಿ ಪವನ್ ಕಲ್ಯಾಣ್ ಅವರಿಗೆ ಈ ಬಿರುದು ನೀಡುತ್ತಿದ್ದೇವೆ ಎಂದು ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳು ಹೇಳಿದರು.

ಪರಮಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ದಾರ್ಶನಿಕ ಮಾರ್ಗದರ್ಶನದಲ್ಲಿ, ಈ ಪವಿತ್ರ ಭೂಮಿ ಒಂದು ಕೋಟಿ ಕೈಬರಹದ ಭಗವದ್ಗೀತೆ ಯೋಜನೆಯಿಂದ ಲಕ್ಷ ಕಾಂತ ಪಾರಾಯಣದವರೆಗೆ – ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುವ ಐತಿಹಾಸಿಕ ಆಧ್ಯಾತ್ಮಿಕ ಚಲನೆಗಳಿಗೆ ಸಾಕ್ಷಿಯಾಗುತ್ತಿದೆ. ಗೀತೆಯ ಸಂದೇಶವು ನಮ್ಮ ಕ್ರಿಯೆಗಳಿಗೆ ಮಾರ್ಗದರ್ಶನ ನೀಡಲಿ, ನಮ್ಮ ಸಮಾಜವನ್ನು ಬಲಪಡಿಸಲಿ ಮತ್ತು ನಮ್ಮ ರಾಷ್ಟ್ರೀಯ ಮನೋಭಾವವನ್ನು ಉನ್ನತೀಕರಿಸಲಿ ಎಂದು ಪವನ್ ಕಲ್ಯಾಣ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು