6:26 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್: ಸೇಕ್ರೆಡ್ ಹಾರ್ಟ್ ವಾರ್ಡ್ ನಲ್ಲಿ ಪೂರ್ವಭಾವಿ ಕ್ರಿಸ್ಮಸ್ ಆಚರಣೆ

08/12/2025, 12:51

ಮಂಗಳೂರು(reporterkarnataka.com): ಯೇಸು ಕ್ರಿಸ್ತರ ಜನನದ ಹಬ್ಬ ಕ್ರಿಸ್ಮಸ್ ಆಚರಣೆಗೆ ಸಿದ್ಧತೆಗಳು ಈಗಾಗಲೇ ಆರಂಭವಾಗಿವೆ. ಸಾರ್ವತ್ರಿಕವಾಗಿ ಡಿಸೆಂಬರ್ 25ರಂದು ಕ್ರಿಸ್ಮಸ್ ಆಚರಿಸಲಾಗುತ್ತಿದ್ದರೂ, ಅದಕ್ಕೆ ಪೂರ್ವ ಭಾವಿಯಾಗಿ ಚರ್ಚ್ ಗಳ ವಾರ್ಡ್ ಮಟ್ಟದಲ್ಲಿ ಕ್ರಿಸ್ಮಸ್ ಆಚರಣೆ ನಡೆಯುತ್ತಲಿದೆ.
ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಸೇಕ್ರೆಡ್ ಹಾರ್ಟ್ ವಾರ್ಡ್ ನಲ್ಲಿ ಕ್ರಿಸ್ಮಸ್ ಆಚರಣೆ ಡಿಸೆಂಬರ್ 7ರಂದು ಭಾನುವಾರ ನಡೆಯಿತು.
ಏಸು ಕ್ರಿಸ್ತರ ಜನನದ ಬಗ್ಗೆ ಬೈಬಲ್ ನಲ್ಲಿರುವ ಉಲ್ಲೇಖದ ವಾಚನ, ಕ್ರಿಸ್ಮಸ್ ಗೀತೆಗಳ ಗಾಯನ, ಕ್ರಿಸ್ತ ಜನನದ ಕುರಿತು ನೃತ್ಯ ರೂಪಕ ಪ್ರದರ್ಶನ ಮತ್ತು ವಿವಿಧ ವಿನೋದಾವಳಿಗಳು ನಡೆದವು.
ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಕ್ರಿಸ್ಮಸ್ ಸಂದೇಶ ನೀಡಿದರು. ಡಿಯಾಕೋನ್ ರೋವಿನ್ ಲೋಪೆಜ್, ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸಿಸ್ಟರ್ ಮೊಂತಿ ಉಪಸ್ಥಿತರಿದ್ದರು.
ವಾರ್ಡಿನ ಮುಖ್ಯಸ್ಥರಾಗಿರುವ ಮೋಲಿ ಡಿ ಸೋಜಾ ಸ್ವಾಗತಿಸಿದರು. ವಾರ್ಡಿನ ಪ್ರಮುಖರಾದ ಅನಿಲ್ ಮಸ್ಕರೇನ್ಹಸ್, ರಿಚಾರ್ಡ್ ಮಾರ್ಟಿಸ್, ರೊನಾಲ್ಡ್ ಮಿನೇಜಸ್, ಬ್ಯಾಪ್ಟಿಸ್ಟ್ ಡಿ ಕುನ್ಹಾ ಮುಂತಾದವರು ಸಹಕರಿಸಿದರು. ಸ್ವೀನಿ ಡಿ ಸೋಜಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು