10:23 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

10/12/2025, 18:09

ಬೆಳಗಾವಿ ಸುವರ್ಣಸೌಧ (reporterkarnataka.com): ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದರು.
ಸಣ್ಣ ಕೈಗಾರಿಕೆಗಳಿಗೆ ಪೆÇ್ರೀತ್ಸಾಹ ನೀಡುವ ಉದ್ದೇಶದಿಂದ 2 ಎಕರೆವರೆಗೆ ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪೆÇ್ರೀವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪರಿವರ್ತನೆ ಅಗತ್ಯವಿಲ್ಲ ಮತ್ತು ಕಂದಾಯ ನ್ಯಾಯಾಲಯ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು