12:17 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಹಂತಕನಿಗೆ ಗಲ್ಲು ಶಿಕ್ಷೆ: ನಾಲ್ವರ ಕೊಂದಾತನಿಗೆ ಮರಣ ದಂಡನೆ

10/12/2025, 18:52

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಲ್ಲಿನ ನ್ಯಾಯಾಲಯ ಎರಡು ಪ್ರಕರಣಗಳಲ್ಲಿ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ವಿರಾಜಪೇಟೆಯ ಸೆಷನ್ಸ್ ನ್ಯಾಯಾಲಯ ಅತಿ ಶೀಘ್ರದಲ್ಲಿ ಶಿಕ್ಷೆ ಪ್ರಕಟಿಸಿದೆ.
ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022 ಮತ್ತು2024 ರಲ್ಲಿ ನಡೆದ ಪ್ರಕರಣ ಇದಾಗಿದೆ. ಪೊನ್ನಂಪೇಟೆ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ಭೇದಿಸಿದ ಎರಡು ಪ್ರಕರಣಕ್ಕೆ ಜೀವಾವಧಿ ಹಾಗೂ ಗಲ್ಲು ಶಿಕ್ಷೆ ಪ್ರಕಟಿಸಿದೆ.
2022 ರಲ್ಲಿ ಮಲ್ಲೂರು ಗ್ರಾಮದಲ್ಲಿ ಪತಿಯಿಂದ ಪತ್ನಿಯ ಕೊಲೆ ಪ್ರಕರಣ ಮತ್ತು 2024ರಲ್ಲಿ ಬೇಗೂರಿನಲ್ಲಿ ನಾಲ್ವರನ್ನು ಮನೆಯಲ್ಲಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ, ಪ್ರತ್ಯೇಕ ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದು, ಜೇನುಕುರುಬರ ರಾಜು ( 60) ಜೇವಾವಧಿ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಲಾಗಿದೆ. ಈತ ಕುಂಬಾರಕಟ್ಟೆ ನಿಟ್ಟಿರು ಗ್ರಾಮದವನಾಗಿದ್ದಾನೆ. ಮತ್ತೊಂದು ನಾಲ್ವರ ಕೊಲೆ ಪ್ರಕರಣದಲ್ಲಿ ಬೇಗೂರು ಗ್ರಾಮದ ಜೇನು ಕುರುಬರ ರವಿ(37) ಎಂಬಾತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು