2:45 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ…

ಇತ್ತೀಚಿನ ಸುದ್ದಿ

ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಹಂತಕನಿಗೆ ಗಲ್ಲು ಶಿಕ್ಷೆ: ನಾಲ್ವರ ಕೊಂದಾತನಿಗೆ ಮರಣ ದಂಡನೆ

10/12/2025, 18:52

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಲ್ಲಿನ ನ್ಯಾಯಾಲಯ ಎರಡು ಪ್ರಕರಣಗಳಲ್ಲಿ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ವಿರಾಜಪೇಟೆಯ ಸೆಷನ್ಸ್ ನ್ಯಾಯಾಲಯ ಅತಿ ಶೀಘ್ರದಲ್ಲಿ ಶಿಕ್ಷೆ ಪ್ರಕಟಿಸಿದೆ.
ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022 ಮತ್ತು2024 ರಲ್ಲಿ ನಡೆದ ಪ್ರಕರಣ ಇದಾಗಿದೆ. ಪೊನ್ನಂಪೇಟೆ ಪೊಲೀಸ್ ಠಾಣೆಯ ತನಿಖಾಧಿಕಾರಿಗಳು ಭೇದಿಸಿದ ಎರಡು ಪ್ರಕರಣಕ್ಕೆ ಜೀವಾವಧಿ ಹಾಗೂ ಗಲ್ಲು ಶಿಕ್ಷೆ ಪ್ರಕಟಿಸಿದೆ.
2022 ರಲ್ಲಿ ಮಲ್ಲೂರು ಗ್ರಾಮದಲ್ಲಿ ಪತಿಯಿಂದ ಪತ್ನಿಯ ಕೊಲೆ ಪ್ರಕರಣ ಮತ್ತು 2024ರಲ್ಲಿ ಬೇಗೂರಿನಲ್ಲಿ ನಾಲ್ವರನ್ನು ಮನೆಯಲ್ಲಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ, ಪ್ರತ್ಯೇಕ ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದು, ಜೇನುಕುರುಬರ ರಾಜು ( 60) ಜೇವಾವಧಿ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಲಾಗಿದೆ. ಈತ ಕುಂಬಾರಕಟ್ಟೆ ನಿಟ್ಟಿರು ಗ್ರಾಮದವನಾಗಿದ್ದಾನೆ. ಮತ್ತೊಂದು ನಾಲ್ವರ ಕೊಲೆ ಪ್ರಕರಣದಲ್ಲಿ ಬೇಗೂರು ಗ್ರಾಮದ ಜೇನು ಕುರುಬರ ರವಿ(37) ಎಂಬಾತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು