10:05 PM Thursday11 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ: ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10/12/2025, 20:52

ನವದೆಹಲಿ(reporterkarnataka.com): ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮದ ಮೇಲೆ ಕೈಗೊಂಡ ಕ್ರಮದ ಬಗ್ಗೆ ಕೇಂದ್ರದ ಕೃಷಿ ಸಚಿವಾಲಯಕ್ಕೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಶ್ನೆ ಕೇಳಿದ್ದಾರೆ ಹಾಗೂ ಅವರ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ.
ದೇಶದ ವಿವಿಧ ಕೃಷಿ ಹವಾಮಾನ ವಲಯಗಳಲ್ಲಿ ಕೃಷಿ ಉತ್ಪಾದಕತೆಯ ಮೇಲೆ ಅನಿಯಮಿತ ಮಳೆ, ಉಷ್ಣದ ಪರಿಣಾಮ ಮತ್ತು ಬರಗಾಲ ಸೇರಿದಂತೆ ಹವಾಮಾನ ಬದಲಾವಣೆಯ ಪರಿಣಾಮದ ಬಗ್ಗೆ ಸರ್ಕಾರ ಯಾವುದೇ ಮೌಲ್ಯಮಾಪನವನ್ನು ನಡೆಸಿದ ಮಾಹಿತಿ, ರಾಷ್ಟ್ರೀಯ ಹವಾಮಾನ ಸ್ಥಿತಿಸ್ಥಾಪಕ ಕೃಷಿ ನಾವೀನ್ಯತೆಗಳು (NICRA) ಕಾರ್ಯಕ್ರಮದ ಅಡಿಯಲ್ಲಿ ಅಸುರಕ್ಷಿತ ಜಿಲ್ಲೆಗಳ ವಿವರಗಳು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಮತ್ತು ತಾಂತ್ರಿಕ ಸಹಾಯವನ್ನು ವಿಸ್ತರಿಸಲು ಸರ್ಕಾರ ಯೋಚಿಸಿದೆಯೇ?
ಹೌದಾದರೆ ಕಳೆದ ಮೂರು ಆರ್ಥಿಕ ವರ್ಷಗಳಲ್ಲಿ ಇಂತಹ ಯೋಜನೆಗಳ ಅಡಿಯಲ್ಲಿ ಮಾಡಲಾದ ಬಜೆಟ್ ವಿನಿಯೋಗ ಹಾಗೂ ಸಾಧನೆಗಳ ವಿವರಗಳನ್ನು ತಿಳಿಸಬೇಕೆಂದು ಸಂಸದರು‌ ಪ್ರಶ್ನೆ ಕೇಳಿದ್ದಾರೆ.
ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರದ ಉತ್ತರ
ಭಾರತದಲ್ಲಿ 651 ಜಿಲ್ಲೆಗಳಲ್ಲಿ ಹವಾಮಾನ ಅಪಾಯ ಮೌಲ್ಯಮಾಪನ ನಡೆಸಲಾಗಿದ್ದು,
310 ಜಿಲ್ಲೆಗಳು ಅಸುರಕ್ಷಿತವೆಂದು ಗುರುತಿಸಲಾಗಿದೆ. NICRA ಯೋಜನೆಯಡಿ 151 ಅಪಾಯಕಾರಿ ಜಿಲ್ಲೆಗಳ 448 ಹವಾಮಾನ ಸಹಿಷ್ಣು ಗ್ರಾಮಗಳಲ್ಲಿ ತಂತ್ರಜ್ಞಾನ ಪ್ರದರ್ಶನ, ಬೀಜ ಬ್ಯಾಂಕ್‌ಗಳು, ಕಸ್ಟಮ್ ಹೈರಿಂಗ್ ಸೆಂಟರ್‌ಗಳು ಸ್ಥಾಪಿಸಲಾಗಿದೆ. 2014–24 ಅವಧಿಯಲ್ಲಿ ICAR 2900 ಹೊಸ ಬೆಳೆ ಜಾತಿಗಳನ್ನು ಬಿಡುಗಡೆಮಾಡಿದ್ದು, ಅವುಗಳಲ್ಲಿ 2661 ಜಾತಿಗಳು ಹವಾಮಾನ ಒತ್ತಡ ತಡೆದುಕೊಳ್ಳುತ್ತವೆ.
ಉದಾಹರಣೆಗೆ ಭತ್ತ,ಗೋಧಿ, ಸೋಯಾಬೀನ್, ಸಾಸಿವೆ, ಕಡಲೆಕಾಳು.
ಕಳೆದ ಮೂರು ವರ್ಷಗಳಲ್ಲಿ ಯೋಜನೆಗೆ ರೂ.1600 ಲಕ್ಷ–2550 ಲಕ್ಷಗಳವರೆಗೆ ಬಜೆಟ್ ವಿನಿಯೋಗ ಮಾಡಲಾಗಿದೆ ಎಂದು ಉತ್ತರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು