12:47 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಪ್ರಧಾನಿಯ ಅವಾಚ್ಯ ಪದಗಳಿಂದ ಅವಹೇಳನ ಪ್ರಕರಣ: ಮಡಿಕೇರಿಯ ಸ್ಪೈಸಸ್ ಅಂಗಡಿಯ ಮೂವರು ಯುವಕರ ಬಂಧನ

11/12/2025, 10:34

*ಪೊಲೀಸರಿಂದ ಸುಮುಟೊ ಕೇಸ್ ದಾಖಲು*

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯ ಸ್ಪೈಸಸ್ ಅಂಗಡಿಯಲ್ಲಿ ಮೂವರು ದೇಶದ ಪ್ರಧಾನಿ ಮೋದಿ ಅವರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇವರ ವಿರುದ್ಧ ಸುಮೊಟೋ ಕೇಶ್ ದಾಖಲಿಸಿ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಡಿಕೇರಿಯ ರಾಣಿ ಪೇಟೆಯ ನಿವಾಸಿ ಇಬ್ರಾಹಿಂ ಎಂಬುವರ ಪುತ್ರ ಫಹಾದ್ ಎಮ್ಮ. ಇ, (31) ತ್ಯಾಗರಾಜ ಕಾಲನಿಯ ನಿವಾಸಿ ಹುಸಿನ್ ಎಂಬುವರ ಪುತ್ರ ಬಾಸಿಲ್ ಎಂ ಎಚ್ (29) ಹಾಗೂ ತ್ಯಾಗರಾಜ ಕಾಲೋನಿಯ ನಿವಾಸಿಯಾದ ಮಜಿದ್ ಎಂಬ ಅವರ ಪುತ್ರ ಸಮೀರ್ ಎಂ.ಎಂ (31) ಬಂಧಿತ ಆರೋಪಿಗಳಾಗಿದ್ದಾರೆ.
ಮೋದಿ ಅವರ ನಿಂದನೆಯನ್ನು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ.
*ಬಿಜೆಪಿ ಪ್ರತಿಭಟನೆ:* ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ನಾಳೆ ಬೆಳಗ್ಗೆ 10.30 ಗಂಟೆಗೆ ಮಡಿಕೇರಿ ಜಿ . ಟಿ. ವೃತ್ತದಲ್ಲಿ ಪ್ರತಿಭಟನೆಗೆ ಮುಂದಾಗಿದೆ.
ಮೋದಿ ಅವರನ್ನು ನಿಂದಿಸಿದ ಪ್ರಕರಣ ಖಂಡಿಸಿ ಅನೇಕರು ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು