7:13 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

11/12/2025, 15:25

ನವದೆಹಲಿ(reporterkarnataka.com): “ಆರೆಸ್ಸೆಸ್ ಶಬ್ದ ಕೇಳಿದರೆ ಸಾಕು ಉರಿದುಬಿಡುತ್ತಿದ್ದ ಕಾಂಗ್ರೆಸ್ಸಿಗರಿಗೆ ಇದೀಗ ಅವರ ಸರ್ಕಾರದಿಂದಲೇ ತಕ್ಕ ಉತ್ತರ ಸಿಕ್ಕಿದೆ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿರುಗೇಟು ಕೊಟ್ಟಿದ್ದಾರೆ.
ಕರ್ನಾಟಕದಲ್ಲಿ ಬೃಹತ್ತಾಗಿ 518 ಆರೆಸ್ಸೆಸ್ ಪಥಸಂಚಲನ ಕಾರ್ಯಕ್ರಮಗಳು ಅತ್ಯಂತ ಶಿಸ್ತುಬದ್ಧವಾಗಿ ಯಶಸ್ವಿಗೊಂಡಿವೆ. ಕಾಂಗ್ರೆಸ್ಸಿಗರು ಮಾಡಿದ ಅಪಪ್ರಚಾರಕ್ಕೆ ಇದು ತಕ್ಕ ಉತ್ತರವಾಗಿದೆ ಎಂದಿದ್ದಾರೆ ಜೋಶಿ.
ರಾಷ್ಟ್ರೀಯ ಸ್ವಯಂ ಸೇವಕರ ಪಥಸಂಚಲನಕ್ಕೆ ಅವಕಾಶ ಕೊಟ್ಟರೆ ಗದ್ದಲ, ಗಲಾಟೆ, ಕೋಮು ಗಲಭೆಗೆ ಕಾರಣವಾಗುತ್ತದೆ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಲೇ ಇತ್ತು. ಆದರೆ, ರಾಜ್ಯದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಪಥಸಂಚಲನ ನಡೆಸಿದ್ದರೂ ಅಂತಹ ಯಾವುದೇ ಅಹಿತಕರ ವಾತಾವರಣ ಉಂಟಾಗಿಲ್ಲ ಎಂದು ಜೋಶಿ ನುಡಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹೆಸರು ಕೇಳಿದರೆ ಸಾಕು ಕಾಂಗ್ರೆಸ್ ನಾಯಕರಿಗೆ ಮೈ ಉರಿಯುತ್ತದೆ. ಇಂಥವರಿಗೆ ಇದೀಗ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವೇ ತಕ್ಕ ಉತ್ತರ ನೀಡಿದೆ‌ ಎಂದು ಕಾಂಗ್ರೆಸ್ ನಾಯಕರಿಗೆ ತುಸು ಜೋಶ್ ಆಗಿಯೇ ಟಾಂಗ್ ಕೊಟ್ಟಿದ್ದಾರೆ.
ಆರ್ ಎಸ್ ಎಸ್ ಸಂಘಟನೆಗೆ ಪಥಸಂಚಲನಕ್ಕೆ ಅನುಮತಿ ನೀಡಿದರೆ ಗಲಾಟೆ, ದೊಂಬಿ ಹಾಗೂ ಕೋಮು ಗಲಭೆಗಳಿಗೆ ದಾರಿಯಾಗುತ್ತದೆ‌ ಎಂಬ ಕಾಂಗ್ರೆಸ್ ನಾಯಕರ ಅಪಪ್ರಚಾರದ ನಡುವೆಯೂ ಧೃತಿಗೆಡದೆ ರಾಜ್ಯದಲ್ಲಿ ಬರೋಬ್ಬರಿ 518 ರಾಷ್ಟ್ರೀಯ ಪಥಸಂಚಲನ ಕಾರ್ಯಕ್ರಮಗಳನ್ನು ನಡೆಸಿದೆ. ಇದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಸ್ತಿಗೆ ಪ್ರತೀಕವಾಗಿದೆ ಮತ್ತು ‘ದೇಶ ಮೊದಲು, ದೇಶ ಸೇವೆಯೇ ಪರಮೋಚ್ಚ’ ಎಂಬ ಆರ್ ಎಸ್ ಎಸ್ ಸಿದ್ಧಾಂತವನ್ನು ಮತ್ತಷ್ಟು ಬಲವಾಗಿ ಪ್ರತಿಪಾದಿಸಿದೆ ಎಂದು ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ಸಿಗರು ಇನ್ನಾದರೂ ಪಾಠ ಕಲಿಯಲಿ. ಆರೆಸ್ಸೆಸ್ ಯಾವತ್ತೂ ರಾಷ್ಟ್ರೀಯ ಹಿತಕ್ಕಾಗಿ ಇರುವಂಥ ಒಂದು ಶತು ಮತ್ತು ಜಾಗೃತೆಯ ಸಂಘಟನೆಯೇ ಹೊರತು ಕೋಮುವಾದ ಬಿತ್ತುವುದು ಅದರ ಕೆಲಸವಲ್ಲ. ದೇಶವನ್ನು ಜಾಗೃತಗೊಳಿಸುವುದೇ ಅದರ ಧ್ಯೇಯ ಮತ್ತು ಶಕ್ತಿ ಎಂಬುದನ್ನು ಅರಿತುಕೊಳ್ಳಲಿ ಎಂದು ಸಚಿವ ಜೋಶಿ ಕಾಂಗ್ರೆಸ್ ನಾಯಕರಿಗೆ ತಿವಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು