9:34 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಸಮುದ್ರದ ಉಪ್ಪು ನೀರನ್ನೆ ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಬಗ್ಗೆ ಸಚಿವ ಅಂಗಾರ ಏನು ಹೇಳಿದರು ಗೊತ್ತಾ ?

04/09/2021, 00:00

ಮಂಗಳೂರು (reporterkarnataka.com):

ಸಮುದ್ರದಲ್ಲಿ ಆಳ ಹಾಗೂ ಒಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಸಮುದ್ರದಲ್ಲಿಯೇ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸಿಕೊಡುವ ಯಂತ್ರವು ಅತ್ಯಂತ ಉಪಯುಕ್ತವಾಗಿದೆ ಹಾಗೂ ಈ ಯತ್ನ ಯಶಸ್ವಿಯಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.

ಅವರು ಶುಕ್ರವಾರ ಸಮುದ್ರದ ಹಳೆ ಬಂದರು ಮಾರ್ಗದ ಮೂಲಕ ಬೆಂಗರೆಗೆ ತೆರಳುವ ಸಂದರ್ಭದಲ್ಲಿ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಪ್ರಾತ್ಯಕ್ಷಿಕೆ ವೀಕ್ಷಿಸಿ ಮಾತನಾಡಿದರು.  

ಆಸ್ಟ್ರೇಲಿಯಾ ತಂತ್ರಜ್ಞಾನದಲ್ಲಿ ನಿರ್ಮಾಣವಾಗಿರುವ ಯಂತ್ರ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುತ್ತದೆ. ಅದು ಈ ಭಾಗದ ಮೀನುಗಾರರಿಗೆ ಅತಿ ಉಪಯುಕ್ತ, ಏಕೆಂದರೆ, ಮೀನುಗಾರಿಕೆ ಮಾಡುವ ಸಂದರ್ಭದಲ್ಲಿ ಮೀನುಗಾರರು ಒಂದು ವಾರ ಅಥವಾ 10 – 15 ದಿನಕ್ಕೂ ಹೆಚ್ಚು ಸಮಯ ಸಮುದ್ರದಲ್ಲಿರುತ್ತಾರೆ.

ಈ ಸಂದರ್ಭಗಳಲ್ಲಿ ಕುಡಿಯಲು, ಸ್ನಾನ ಸೇರಿದಂತೆ ಇತರೆ ಅನುಕೂಲಗಳಿಗೆ ಸಮುದ್ರದ ತಟದಿಂದ ನೀರನ್ನು ಪೂರೈಕೆ ಮಾಡಬೇಕು, ಅದರ ಬದಲಾಗಿ ಸಮುದ್ರದ ನೀರನ್ನೇ ಸಿಹಿ ನೀರನ್ನಾಗಿ ಪರಿವರ್ತಿಸುವ ಘಟಕವನ್ನು ಮೀನುಗಾರಿಕೆ ಬೋಟುಗಳಿಗೆ ಅಳವಡಿಸಿಕೊಟ್ಟಲ್ಲೀ, ಸಿಹಿ ನೀರನ್ನು ಕೊಂಡುಹೋಗಬೇಕಾದ ಪರಿಸ್ಥಿತಿ ಬರುವುದಿಲ್ಲ, ಅಲ್ಲದೇ ಬೋಟುಗಳಿಗೆ ಹಾಕುವ ಲೋಡು ಕೂಡ ಕಡಿಮೆಯಾಗುತ್ತದೆ, ಮುಖ್ಯವಾಗಿ ಬೋಟಿನಲ್ಲಿ ನೀರು ಸಂಗ್ರಹಿಸಲು ಮೀಸಲಿರಿಸಿದ್ದ ಸ್ಥಳವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಮೀನುಗಾರರು ಎಲ್ಲಿಯೇ ಹೋದರೂ, ಯಾವುದೇ ಸಂದರ್ಭದಲ್ಲಿ ಕೂಡ ಅವರಿಗೆ ಸಿಹಿ ನೀರಿನ ಅವಶ್ಯಕತೆ ಬಂದಾಗ ಉಪ್ಪು ನೀರನ್ನು ಸಿಹಿ ನೀರಾಗಿ ಪರಿವರ್ತತಿಸುವ ಯಂತ್ರವನ್ನು ಬಳಸಿಕೊಂಡು ಸಿಹಿ ನೀರನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಒಳ ಹಾಗೂ ಆಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಈ ಯಂತ್ರದ ಉಪಯುಕ್ತತೆಯನ್ನು ತಿಳಿಸಿಕೊಡುವ ಉದ್ದೇಶದಿಂದ ಈ ಪ್ರಾತ್ಯಕ್ಷಿಕೆ ಕೈಗೊಳ್ಳಲಾಗಿದೆ, ಅಗತ್ಯವಿರುವ ಮೀನುಗಾರರು ಈ ಯಂತ್ರವನ್ನು ಖರೀದಿಸಲು ಸರಕಾರದ ವತಿಯಿಂದ ನೀಡಬಹುದಾದ ಸಹಾಯಧನದ ಕುರಿತಂತೆ ಸರಕಾರದ ಮಟ್ಟದಲ್ಲಿ ಚರ್ಚಿಸಿ, ಅದನ್ನು ಕಾರ್ಯರೂಪಕ್ಕೆ ತರಲು ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು.

ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ನಿತೀನ್ ಕುಮಾರ್, ಬೆಂಗಳೂರಿನ ಮೀನುಗಾರಿಕೆ ಇಲಾಖೆಯ ನಿರ್ದೇಶಕ ರಾಮಚಾರ್ಯ, ಜಿಲ್ಲಾ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್, ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಎಂ.ಎಲ್. ದೊಡ್ಡಮನಿ ಸೇರಿದಂತೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು