10:08 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸಮುದ್ರದ ಉಪ್ಪು ನೀರನ್ನೆ ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಬಗ್ಗೆ ಸಚಿವ ಅಂಗಾರ ಏನು ಹೇಳಿದರು ಗೊತ್ತಾ ?

04/09/2021, 00:00

ಮಂಗಳೂರು (reporterkarnataka.com):

ಸಮುದ್ರದಲ್ಲಿ ಆಳ ಹಾಗೂ ಒಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಸಮುದ್ರದಲ್ಲಿಯೇ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸಿಕೊಡುವ ಯಂತ್ರವು ಅತ್ಯಂತ ಉಪಯುಕ್ತವಾಗಿದೆ ಹಾಗೂ ಈ ಯತ್ನ ಯಶಸ್ವಿಯಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.

ಅವರು ಶುಕ್ರವಾರ ಸಮುದ್ರದ ಹಳೆ ಬಂದರು ಮಾರ್ಗದ ಮೂಲಕ ಬೆಂಗರೆಗೆ ತೆರಳುವ ಸಂದರ್ಭದಲ್ಲಿ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಪ್ರಾತ್ಯಕ್ಷಿಕೆ ವೀಕ್ಷಿಸಿ ಮಾತನಾಡಿದರು.  

ಆಸ್ಟ್ರೇಲಿಯಾ ತಂತ್ರಜ್ಞಾನದಲ್ಲಿ ನಿರ್ಮಾಣವಾಗಿರುವ ಯಂತ್ರ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುತ್ತದೆ. ಅದು ಈ ಭಾಗದ ಮೀನುಗಾರರಿಗೆ ಅತಿ ಉಪಯುಕ್ತ, ಏಕೆಂದರೆ, ಮೀನುಗಾರಿಕೆ ಮಾಡುವ ಸಂದರ್ಭದಲ್ಲಿ ಮೀನುಗಾರರು ಒಂದು ವಾರ ಅಥವಾ 10 – 15 ದಿನಕ್ಕೂ ಹೆಚ್ಚು ಸಮಯ ಸಮುದ್ರದಲ್ಲಿರುತ್ತಾರೆ.

ಈ ಸಂದರ್ಭಗಳಲ್ಲಿ ಕುಡಿಯಲು, ಸ್ನಾನ ಸೇರಿದಂತೆ ಇತರೆ ಅನುಕೂಲಗಳಿಗೆ ಸಮುದ್ರದ ತಟದಿಂದ ನೀರನ್ನು ಪೂರೈಕೆ ಮಾಡಬೇಕು, ಅದರ ಬದಲಾಗಿ ಸಮುದ್ರದ ನೀರನ್ನೇ ಸಿಹಿ ನೀರನ್ನಾಗಿ ಪರಿವರ್ತಿಸುವ ಘಟಕವನ್ನು ಮೀನುಗಾರಿಕೆ ಬೋಟುಗಳಿಗೆ ಅಳವಡಿಸಿಕೊಟ್ಟಲ್ಲೀ, ಸಿಹಿ ನೀರನ್ನು ಕೊಂಡುಹೋಗಬೇಕಾದ ಪರಿಸ್ಥಿತಿ ಬರುವುದಿಲ್ಲ, ಅಲ್ಲದೇ ಬೋಟುಗಳಿಗೆ ಹಾಕುವ ಲೋಡು ಕೂಡ ಕಡಿಮೆಯಾಗುತ್ತದೆ, ಮುಖ್ಯವಾಗಿ ಬೋಟಿನಲ್ಲಿ ನೀರು ಸಂಗ್ರಹಿಸಲು ಮೀಸಲಿರಿಸಿದ್ದ ಸ್ಥಳವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಮೀನುಗಾರರು ಎಲ್ಲಿಯೇ ಹೋದರೂ, ಯಾವುದೇ ಸಂದರ್ಭದಲ್ಲಿ ಕೂಡ ಅವರಿಗೆ ಸಿಹಿ ನೀರಿನ ಅವಶ್ಯಕತೆ ಬಂದಾಗ ಉಪ್ಪು ನೀರನ್ನು ಸಿಹಿ ನೀರಾಗಿ ಪರಿವರ್ತತಿಸುವ ಯಂತ್ರವನ್ನು ಬಳಸಿಕೊಂಡು ಸಿಹಿ ನೀರನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಒಳ ಹಾಗೂ ಆಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಈ ಯಂತ್ರದ ಉಪಯುಕ್ತತೆಯನ್ನು ತಿಳಿಸಿಕೊಡುವ ಉದ್ದೇಶದಿಂದ ಈ ಪ್ರಾತ್ಯಕ್ಷಿಕೆ ಕೈಗೊಳ್ಳಲಾಗಿದೆ, ಅಗತ್ಯವಿರುವ ಮೀನುಗಾರರು ಈ ಯಂತ್ರವನ್ನು ಖರೀದಿಸಲು ಸರಕಾರದ ವತಿಯಿಂದ ನೀಡಬಹುದಾದ ಸಹಾಯಧನದ ಕುರಿತಂತೆ ಸರಕಾರದ ಮಟ್ಟದಲ್ಲಿ ಚರ್ಚಿಸಿ, ಅದನ್ನು ಕಾರ್ಯರೂಪಕ್ಕೆ ತರಲು ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು.

ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ನಿತೀನ್ ಕುಮಾರ್, ಬೆಂಗಳೂರಿನ ಮೀನುಗಾರಿಕೆ ಇಲಾಖೆಯ ನಿರ್ದೇಶಕ ರಾಮಚಾರ್ಯ, ಜಿಲ್ಲಾ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್, ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಎಂ.ಎಲ್. ದೊಡ್ಡಮನಿ ಸೇರಿದಂತೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು