2:12 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಸಮುದ್ರದ ಉಪ್ಪು ನೀರನ್ನೆ ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಬಗ್ಗೆ ಸಚಿವ ಅಂಗಾರ ಏನು ಹೇಳಿದರು ಗೊತ್ತಾ ?

04/09/2021, 00:00

ಮಂಗಳೂರು (reporterkarnataka.com):

ಸಮುದ್ರದಲ್ಲಿ ಆಳ ಹಾಗೂ ಒಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಸಮುದ್ರದಲ್ಲಿಯೇ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸಿಕೊಡುವ ಯಂತ್ರವು ಅತ್ಯಂತ ಉಪಯುಕ್ತವಾಗಿದೆ ಹಾಗೂ ಈ ಯತ್ನ ಯಶಸ್ವಿಯಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.

ಅವರು ಶುಕ್ರವಾರ ಸಮುದ್ರದ ಹಳೆ ಬಂದರು ಮಾರ್ಗದ ಮೂಲಕ ಬೆಂಗರೆಗೆ ತೆರಳುವ ಸಂದರ್ಭದಲ್ಲಿ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಪ್ರಾತ್ಯಕ್ಷಿಕೆ ವೀಕ್ಷಿಸಿ ಮಾತನಾಡಿದರು.  

ಆಸ್ಟ್ರೇಲಿಯಾ ತಂತ್ರಜ್ಞಾನದಲ್ಲಿ ನಿರ್ಮಾಣವಾಗಿರುವ ಯಂತ್ರ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುತ್ತದೆ. ಅದು ಈ ಭಾಗದ ಮೀನುಗಾರರಿಗೆ ಅತಿ ಉಪಯುಕ್ತ, ಏಕೆಂದರೆ, ಮೀನುಗಾರಿಕೆ ಮಾಡುವ ಸಂದರ್ಭದಲ್ಲಿ ಮೀನುಗಾರರು ಒಂದು ವಾರ ಅಥವಾ 10 – 15 ದಿನಕ್ಕೂ ಹೆಚ್ಚು ಸಮಯ ಸಮುದ್ರದಲ್ಲಿರುತ್ತಾರೆ.

ಈ ಸಂದರ್ಭಗಳಲ್ಲಿ ಕುಡಿಯಲು, ಸ್ನಾನ ಸೇರಿದಂತೆ ಇತರೆ ಅನುಕೂಲಗಳಿಗೆ ಸಮುದ್ರದ ತಟದಿಂದ ನೀರನ್ನು ಪೂರೈಕೆ ಮಾಡಬೇಕು, ಅದರ ಬದಲಾಗಿ ಸಮುದ್ರದ ನೀರನ್ನೇ ಸಿಹಿ ನೀರನ್ನಾಗಿ ಪರಿವರ್ತಿಸುವ ಘಟಕವನ್ನು ಮೀನುಗಾರಿಕೆ ಬೋಟುಗಳಿಗೆ ಅಳವಡಿಸಿಕೊಟ್ಟಲ್ಲೀ, ಸಿಹಿ ನೀರನ್ನು ಕೊಂಡುಹೋಗಬೇಕಾದ ಪರಿಸ್ಥಿತಿ ಬರುವುದಿಲ್ಲ, ಅಲ್ಲದೇ ಬೋಟುಗಳಿಗೆ ಹಾಕುವ ಲೋಡು ಕೂಡ ಕಡಿಮೆಯಾಗುತ್ತದೆ, ಮುಖ್ಯವಾಗಿ ಬೋಟಿನಲ್ಲಿ ನೀರು ಸಂಗ್ರಹಿಸಲು ಮೀಸಲಿರಿಸಿದ್ದ ಸ್ಥಳವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಮೀನುಗಾರರು ಎಲ್ಲಿಯೇ ಹೋದರೂ, ಯಾವುದೇ ಸಂದರ್ಭದಲ್ಲಿ ಕೂಡ ಅವರಿಗೆ ಸಿಹಿ ನೀರಿನ ಅವಶ್ಯಕತೆ ಬಂದಾಗ ಉಪ್ಪು ನೀರನ್ನು ಸಿಹಿ ನೀರಾಗಿ ಪರಿವರ್ತತಿಸುವ ಯಂತ್ರವನ್ನು ಬಳಸಿಕೊಂಡು ಸಿಹಿ ನೀರನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಒಳ ಹಾಗೂ ಆಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಈ ಯಂತ್ರದ ಉಪಯುಕ್ತತೆಯನ್ನು ತಿಳಿಸಿಕೊಡುವ ಉದ್ದೇಶದಿಂದ ಈ ಪ್ರಾತ್ಯಕ್ಷಿಕೆ ಕೈಗೊಳ್ಳಲಾಗಿದೆ, ಅಗತ್ಯವಿರುವ ಮೀನುಗಾರರು ಈ ಯಂತ್ರವನ್ನು ಖರೀದಿಸಲು ಸರಕಾರದ ವತಿಯಿಂದ ನೀಡಬಹುದಾದ ಸಹಾಯಧನದ ಕುರಿತಂತೆ ಸರಕಾರದ ಮಟ್ಟದಲ್ಲಿ ಚರ್ಚಿಸಿ, ಅದನ್ನು ಕಾರ್ಯರೂಪಕ್ಕೆ ತರಲು ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು.

ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ನಿತೀನ್ ಕುಮಾರ್, ಬೆಂಗಳೂರಿನ ಮೀನುಗಾರಿಕೆ ಇಲಾಖೆಯ ನಿರ್ದೇಶಕ ರಾಮಚಾರ್ಯ, ಜಿಲ್ಲಾ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್, ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಎಂ.ಎಲ್. ದೊಡ್ಡಮನಿ ಸೇರಿದಂತೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು